Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Published : May 15, 2023, 08:59 PM IST

ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ.

ಬೆಂಗಳೂರು (ಮೇ.15): ಮುಖ್ಯಮಂತ್ರಿ ಕುರ್ಚಿಗಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೆ ಡಿಸಿಎಂ ಸ್ಥಾನಕ್ಕೆ ಕೂಡ ಪಟ್ಟು  ಶುರುವಾಗಿದೆ. ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  ಮುಸ್ಲಿಂ ಸಮುದಾಯಕ್ಕೆ ಭಾರೀ ಅನ್ಯಾಯವಾಗ್ತಿದೆ, ಡಿಸಿಎಂ ಸ್ಥಾನ ಕೊಡಿ ಎಂದು ಮುಸ್ಲಿಂ ಧರ್ಮಗುರುಗಳು ಪಟ್ಟು ಹಿಡಿದಿದ್ದಾರೆ. 1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ. ಏಷ್ಯಾನೆಟ್ ಸುವರ್ಣನ್ಯೂಸ್ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸಫಿ ಶಾ ಅದಿ ಹೇಳಿಕೆ ನೀಡಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸಲ್ಮಾನರೇ ಪ್ರಮುಖ ಕಾರಣ. ಎಸ್ ಸಿ ಎಸ್ಟಿಗಳನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನಸಂಖ್ಯೆ ಹೊಂದಿರೋದು ಮುಸ್ಲಿಂ‌ ಸಮುದಾಯ. ಅವರ ಲೆಕ್ಕಾರದ ಪ್ರಕಾರ 80ಲಕ್ಷ 16% ಮುಸಲ್ಮಾನರಿದ್ದೇವೆ. ನಮ್ಮ ಲೆಕ್ಕಾಚಾರದ ಪ್ರಕಾರ 95ರಿಂದ 1ಕೋಟಿ ಜನರಿದ್ದೇವೆ. ಅಧಿಕೃತ ಲೆಕ್ಕಾಚಾರದ ಪ್ರಕಾರ ಲಿಂಗಾಯತ ಹಾಗೂ ಒಕ್ಕಲಿಗರಿಗಿಂತ ಮೂರು ಪಟ್ಟು ಹೆಚ್ಚು ಜನಸಂಖ್ಯೆ ನಮ್ಮಲ್ಲಿದೆ. ಆದ್ರೂ ರಾಜ್ಯದಲ್ಲಿ ಇದುವರೆಗೂ ಸಿಎಂ ಡಿಸಿಎಂ ಆಗಿಲ್ಲ ಅನ್ನೋದು ಬೇಸರದ ಸಂಗತಿ. 88% ಮತ ಹಾಕಿದ್ದೇ ಮುಸಲ್ಮಾನರು, ಕುರುಬ, ಒಕ್ಕಲಿಗ ಸಮುದಾಯದವ್ರು ಶೇಕಡಾವಾರು ಮತದಾನ ಹರಿದು ಹಂಚಿಹೋಗಿದೆ. 4% ಮೀಸಲಾತಿಯನ್ನು ನೀಡುವ ಭರವಸೆ ಕಾಂಗ್ರೆಸ್ ಭರವಸೆ ನೀಡಿತ್ತು. ಭರವಸೆ ಈಡೇರಿಸ್ತಾರೆ ಅನ್ನೋ ನಂಬಿಕೆ ಇದೆ ಎಂದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more