40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

Published : Jul 21, 2022, 03:29 PM ISTUpdated : Jul 21, 2022, 03:45 PM IST

ರಾಷ್ಟ್ರಮಟ್ಟದಲ್ಲಿ  ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕರಣ ಸಂಚಲನ ಮೂಡಿಸಿತ್ತು. ಇದು ಅಂದಿನ ಸಚಿನವಾಗಿದ್ದ ಕೆ.ಎಸ್‌.ಈಶ್ವರಪ್ಪ ಕೊರಳಿಗೆ ಉರುಳಾಗಿತ್ತು. ಇದೀಗ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಿದ್ದು, ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕರಣ ಸಂಚಲನ ಮೂಡಿಸಿತ್ತು. ಇದು ಅಂದಿನ ಸಚಿನವಾಗಿದ್ದ ಕೆ.ಎಸ್‌.ಈಶ್ವರಪ್ಪ ಕೊರಳಿಗೆ ಉರುಳಾಗಿತ್ತು. ಇದೀಗ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಿದ್ದು, ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಉಡುಪಿಯ ಹೊಟೇಲ್‌ವೊಂದರಲ್ಲಿ ಸಂತೋಷ್‌ ಪಾಟೀಲ್‌ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಈಶ್ವರಪ್ಪ ಪ್ರಚೋದಿಸಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳು ಇಲ್ಲ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಉಡುಪಿ ಪೊಲೀಸರು 1890 ಪುಟಗಳ ತನಿಖಾ ವರದಿಯನ್ನು ಸಿದ್ದಪಡಿಸಿದ್ದು, 85 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಗೆ ಕೆ.ಎಸ್‌.ಈಶ್ವರಪ್ಪ ಅವರು ಕಳೆದ ಏ.15ರಂದು ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿರುವುದು ಈಶ್ವರಪ್ಪ ಅವರಿಗೆ ರಿಲೀಫ್‌ ಸಿಕ್ಕಿದ್ದು, ಮತ್ತೊಮ್ಮೆ ಸಚಿವ ಸ್ಥಾನ ಸಿಗುವ ಆಸೆ ಚಿಗುರೊಡೆದಿದೆ. ಆದರೆ, ನ್ಯಾಯಾಲಯವು ವರದಿಯನ್ನು ಇನ್ನೂ ಅಂಗೀಕರಿಸಿಲ್ಲ. ಬಿ ರಿಪೋರ್ಟ್ ಕುರಿತು ತೀರ್ಪು ಪ್ರಕಟಿಸಿದ ಬಳಿಕವಷ್ಟೇ ಈಶ್ವರಪ್ಪ ನಿರಾಳರಾಗಲಿದ್ದಾರೆ. ಜೊತೆಗೆ ಮೃತ ಸಂತೋಷ್‌ ಪಾಟೀಲ್‌ ಕುಟುಂಬಸ್ಥರಿಂದ ವರದಿಗೆ ಆಕ್ಷೇಪ ವ್ಯಕ್ತವಾಗದಿದ್ದರೆ ನ್ಯಾಯಾಲಯವು ಪ್ರಕರಣವನ್ನು ಮುಗಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಮತ್ತೆ ಸಂಕಷ್ಟಎದುರಾಗುವ ಸಾಧ್ಯತೆ ಇರಲಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more