40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

40% ಕಮಿಷನ್ : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್‌ಚಿಟ್, ಮುಂದೇನು?

Published : Jul 21, 2022, 03:29 PM ISTUpdated : Jul 21, 2022, 03:45 PM IST

ರಾಷ್ಟ್ರಮಟ್ಟದಲ್ಲಿ  ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕರಣ ಸಂಚಲನ ಮೂಡಿಸಿತ್ತು. ಇದು ಅಂದಿನ ಸಚಿನವಾಗಿದ್ದ ಕೆ.ಎಸ್‌.ಈಶ್ವರಪ್ಪ ಕೊರಳಿಗೆ ಉರುಳಾಗಿತ್ತು. ಇದೀಗ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಿದ್ದು, ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ (Santosh Suicide Case) ಪ್ರಕರಣ ಸಂಚಲನ ಮೂಡಿಸಿತ್ತು. ಇದು ಅಂದಿನ ಸಚಿನವಾಗಿದ್ದ ಕೆ.ಎಸ್‌.ಈಶ್ವರಪ್ಪ ಕೊರಳಿಗೆ ಉರುಳಾಗಿತ್ತು. ಇದೀಗ ಅವರಿಗೆ ದೊಡ್ಡ ರಿಲೀಫ್‌ ಸಿಕ್ಕಿದ್ದು, ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಉಡುಪಿಯ ಹೊಟೇಲ್‌ವೊಂದರಲ್ಲಿ ಸಂತೋಷ್‌ ಪಾಟೀಲ್‌ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಈಶ್ವರಪ್ಪ ಪ್ರಚೋದಿಸಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳು ಇಲ್ಲ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಉಡುಪಿ ಪೊಲೀಸರು 1890 ಪುಟಗಳ ತನಿಖಾ ವರದಿಯನ್ನು ಸಿದ್ದಪಡಿಸಿದ್ದು, 85 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಗೆ ಕೆ.ಎಸ್‌.ಈಶ್ವರಪ್ಪ ಅವರು ಕಳೆದ ಏ.15ರಂದು ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿರುವುದು ಈಶ್ವರಪ್ಪ ಅವರಿಗೆ ರಿಲೀಫ್‌ ಸಿಕ್ಕಿದ್ದು, ಮತ್ತೊಮ್ಮೆ ಸಚಿವ ಸ್ಥಾನ ಸಿಗುವ ಆಸೆ ಚಿಗುರೊಡೆದಿದೆ. ಆದರೆ, ನ್ಯಾಯಾಲಯವು ವರದಿಯನ್ನು ಇನ್ನೂ ಅಂಗೀಕರಿಸಿಲ್ಲ. ಬಿ ರಿಪೋರ್ಟ್ ಕುರಿತು ತೀರ್ಪು ಪ್ರಕಟಿಸಿದ ಬಳಿಕವಷ್ಟೇ ಈಶ್ವರಪ್ಪ ನಿರಾಳರಾಗಲಿದ್ದಾರೆ. ಜೊತೆಗೆ ಮೃತ ಸಂತೋಷ್‌ ಪಾಟೀಲ್‌ ಕುಟುಂಬಸ್ಥರಿಂದ ವರದಿಗೆ ಆಕ್ಷೇಪ ವ್ಯಕ್ತವಾಗದಿದ್ದರೆ ನ್ಯಾಯಾಲಯವು ಪ್ರಕರಣವನ್ನು ಮುಗಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಮತ್ತೆ ಸಂಕಷ್ಟಎದುರಾಗುವ ಸಾಧ್ಯತೆ ಇರಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more