ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

Published : May 15, 2023, 11:14 PM IST

ಸಿಎಂ ಆಯ್ಕೆ ಕಸರತ್ತಿನ ಬೆನ್ನಲ್ಲೇ ಸಂದೇಶ ಕಳುಹಿಸಿದ ಡಿಕೆಶಿ, ಸಿದ್ದರಾಮಯ್ಯ ಪರ ಆಪ್ತರ ಬ್ಯಾಟಿಂಗ್, ಕರ್ನಾಟಕ ಸಿಎಂ ಯಾರು?, ಡಿಕೆ ಶಿವಕುಮಾರ್ ಸಿಎಂ ಮಾಡಲು ಒಕ್ಕಲಿಗರ ಸಂಘದ ಒತ್ತಾಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಪಟ್ಟು ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಇಬ್ಬರು ನಾಯಕರು ತಂತ್ರ ಬಿಗಿಗೊಳಿಸಿದ್ದಾರೆ. ಸಿದ್ದು ದಿಲ್ಲಿಯಲ್ಲಿ ಕುಳಿತರೆ, ಡಿಕೆಶಿ ಬೆಂಗಳೂರಿನಲ್ಲಿ ಕುಳಿತೇ ಕುರ್ಚಿಗಾಗಿ ತಂತ್ರ ಹಣೆದಿದ್ದಾರೆ.ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದರೂ, ಡಿಕೆ ಶಿವಕುಮಾರ್ ಮಾತ್ರ ದೆಹಲಿಗೆ ತೆರಳಿಲ್ಲ. ಸಿಎಂ ಮಾಡುದಾದರೆ ಮಾತ್ರ ದೆಹಲಿಗೆ ಬರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದು ಆಪ್ತರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಆಪ್ತರು ಇದೀಗ ಹೈಕಮಾಂಡ್ ಮುಂದೆಯೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ಸಿಎಂ ಮಾಡಲೇಬೇಕು ಎಂದು ಒಕ್ಕಲಿಗರದ ಸಂಘ ಒತ್ತಾಯಿಸಿದೆ. ಇಂದು ಸಭೆ ಸೇರಿದ ಒಕ್ಕಲಿಗರ ಸಂಘ ಬೃಹತ್ ರ್ಯಾಲಿ ಕೈಗೊಳ್ಳಲು ಪ್ಲಾನ್ ಮಾಡಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more