ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

Published : May 15, 2023, 11:14 PM IST

ಸಿಎಂ ಆಯ್ಕೆ ಕಸರತ್ತಿನ ಬೆನ್ನಲ್ಲೇ ಸಂದೇಶ ಕಳುಹಿಸಿದ ಡಿಕೆಶಿ, ಸಿದ್ದರಾಮಯ್ಯ ಪರ ಆಪ್ತರ ಬ್ಯಾಟಿಂಗ್, ಕರ್ನಾಟಕ ಸಿಎಂ ಯಾರು?, ಡಿಕೆ ಶಿವಕುಮಾರ್ ಸಿಎಂ ಮಾಡಲು ಒಕ್ಕಲಿಗರ ಸಂಘದ ಒತ್ತಾಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಪಟ್ಟು ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಇಬ್ಬರು ನಾಯಕರು ತಂತ್ರ ಬಿಗಿಗೊಳಿಸಿದ್ದಾರೆ. ಸಿದ್ದು ದಿಲ್ಲಿಯಲ್ಲಿ ಕುಳಿತರೆ, ಡಿಕೆಶಿ ಬೆಂಗಳೂರಿನಲ್ಲಿ ಕುಳಿತೇ ಕುರ್ಚಿಗಾಗಿ ತಂತ್ರ ಹಣೆದಿದ್ದಾರೆ.ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದರೂ, ಡಿಕೆ ಶಿವಕುಮಾರ್ ಮಾತ್ರ ದೆಹಲಿಗೆ ತೆರಳಿಲ್ಲ. ಸಿಎಂ ಮಾಡುದಾದರೆ ಮಾತ್ರ ದೆಹಲಿಗೆ ಬರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದು ಆಪ್ತರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಆಪ್ತರು ಇದೀಗ ಹೈಕಮಾಂಡ್ ಮುಂದೆಯೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ಸಿಎಂ ಮಾಡಲೇಬೇಕು ಎಂದು ಒಕ್ಕಲಿಗರದ ಸಂಘ ಒತ್ತಾಯಿಸಿದೆ. ಇಂದು ಸಭೆ ಸೇರಿದ ಒಕ್ಕಲಿಗರ ಸಂಘ ಬೃಹತ್ ರ್ಯಾಲಿ ಕೈಗೊಳ್ಳಲು ಪ್ಲಾನ್ ಮಾಡಿದೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more