ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

Published : May 15, 2023, 11:14 PM IST

ಸಿಎಂ ಆಯ್ಕೆ ಕಸರತ್ತಿನ ಬೆನ್ನಲ್ಲೇ ಸಂದೇಶ ಕಳುಹಿಸಿದ ಡಿಕೆಶಿ, ಸಿದ್ದರಾಮಯ್ಯ ಪರ ಆಪ್ತರ ಬ್ಯಾಟಿಂಗ್, ಕರ್ನಾಟಕ ಸಿಎಂ ಯಾರು?, ಡಿಕೆ ಶಿವಕುಮಾರ್ ಸಿಎಂ ಮಾಡಲು ಒಕ್ಕಲಿಗರ ಸಂಘದ ಒತ್ತಾಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಪಟ್ಟು ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಇಬ್ಬರು ನಾಯಕರು ತಂತ್ರ ಬಿಗಿಗೊಳಿಸಿದ್ದಾರೆ. ಸಿದ್ದು ದಿಲ್ಲಿಯಲ್ಲಿ ಕುಳಿತರೆ, ಡಿಕೆಶಿ ಬೆಂಗಳೂರಿನಲ್ಲಿ ಕುಳಿತೇ ಕುರ್ಚಿಗಾಗಿ ತಂತ್ರ ಹಣೆದಿದ್ದಾರೆ.ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದರೂ, ಡಿಕೆ ಶಿವಕುಮಾರ್ ಮಾತ್ರ ದೆಹಲಿಗೆ ತೆರಳಿಲ್ಲ. ಸಿಎಂ ಮಾಡುದಾದರೆ ಮಾತ್ರ ದೆಹಲಿಗೆ ಬರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದು ಆಪ್ತರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಆಪ್ತರು ಇದೀಗ ಹೈಕಮಾಂಡ್ ಮುಂದೆಯೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ಸಿಎಂ ಮಾಡಲೇಬೇಕು ಎಂದು ಒಕ್ಕಲಿಗರದ ಸಂಘ ಒತ್ತಾಯಿಸಿದೆ. ಇಂದು ಸಭೆ ಸೇರಿದ ಒಕ್ಕಲಿಗರ ಸಂಘ ಬೃಹತ್ ರ್ಯಾಲಿ ಕೈಗೊಳ್ಳಲು ಪ್ಲಾನ್ ಮಾಡಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more