ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

Published : Aug 14, 2022, 04:54 PM IST

ದೇಶದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭಾನುವಾರ ಮಾಧ್ಯಮ ಜಾಹೀರಾತು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರ ಈ ಜಾಹೀರಾತಿನಲ್ಲಿ ಜವಹರಲಾಲ್‌ ನೆಹರೂ ಅವರ ಚಿತ್ರವನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

ಬೆಂಗಳೂರು (ಆ.14): ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ನೀಡಿದ ಮಾಧ್ಯಮ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಫೋಟೋವನ್ನು ರಾಜ್ಯ ಸರ್ಕಾರ ಬಿಟ್ಟಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಅಧಿಕಾರ ಉಳಿಸಿಕೊಳ್ಳಲು ಈ ಪರಿ ಗುಲಾಮಗಿರಿ ಅಗತ್ಯವಿರಲಿಲ್ಲ. ನೆಹರು ಹೆಸರು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು. ಹೊರಾಟದಲ್ಲಿ ಭಾಗಿಯಾಗಿ ನೆಹರು 9 ವರ್ಷ ಜೈಲಿನಲ್ಲಿದ್ದರು. ಸಾವರ್ಕರ್‌ ಅವರಂತೆ ಜೈಲಿನಿಂದ ಬಿಡುಗಡೆಯಾಗಲು ಬ್ರಿಟಿಷರ ಕಾಲನ್ನು ಇವರು ಹಿಡಿದಿರಲಿಲ್ಲ. ನೆಹರೂ ಅವರಿಗೆ ಮಾಡಿರುವ ಅಪಮಾನವನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Modi vs Nehru ನೆಹರೂ ಎಲ್ಲಿ? ಮೋದಿ ಎಲ್ಲಿ? ಆಕಾಶ ಭೂಮಿಯಷ್ಟು ಅಂತರ ಎಂದ ಸಿದ್ದರಾಮಯ್ಯ

ಟ್ವೀಟ್‌ ಮೂಲಕ ಸಿದ್ಧರಾಮಯ್ಯ ಕಿಡಿಕಾರಿದ್ದು, ಇದು ನೆಹರೂ ಅವರಿಗೆ ಮಾಡಿರುವ ನೇರ ಅವಮಾನ ಎಂದಿದ್ದಾರೆ. ಬೊಮ್ಮಾಯಿಯಂಥ ಮುಖ್ಯಮಂತ್ರಿಯಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈಗ ಬೊಮ್ಮಾಯಿ ಇತಿಹಾಸವನ್ನೇ ತಿರುಚುವ ಪ್ರಯತ್ನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more