ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

Published : Aug 14, 2022, 04:54 PM IST

ದೇಶದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭಾನುವಾರ ಮಾಧ್ಯಮ ಜಾಹೀರಾತು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರ ಈ ಜಾಹೀರಾತಿನಲ್ಲಿ ಜವಹರಲಾಲ್‌ ನೆಹರೂ ಅವರ ಚಿತ್ರವನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

ಬೆಂಗಳೂರು (ಆ.14): ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ನೀಡಿದ ಮಾಧ್ಯಮ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಫೋಟೋವನ್ನು ರಾಜ್ಯ ಸರ್ಕಾರ ಬಿಟ್ಟಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಅಧಿಕಾರ ಉಳಿಸಿಕೊಳ್ಳಲು ಈ ಪರಿ ಗುಲಾಮಗಿರಿ ಅಗತ್ಯವಿರಲಿಲ್ಲ. ನೆಹರು ಹೆಸರು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು. ಹೊರಾಟದಲ್ಲಿ ಭಾಗಿಯಾಗಿ ನೆಹರು 9 ವರ್ಷ ಜೈಲಿನಲ್ಲಿದ್ದರು. ಸಾವರ್ಕರ್‌ ಅವರಂತೆ ಜೈಲಿನಿಂದ ಬಿಡುಗಡೆಯಾಗಲು ಬ್ರಿಟಿಷರ ಕಾಲನ್ನು ಇವರು ಹಿಡಿದಿರಲಿಲ್ಲ. ನೆಹರೂ ಅವರಿಗೆ ಮಾಡಿರುವ ಅಪಮಾನವನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Modi vs Nehru ನೆಹರೂ ಎಲ್ಲಿ? ಮೋದಿ ಎಲ್ಲಿ? ಆಕಾಶ ಭೂಮಿಯಷ್ಟು ಅಂತರ ಎಂದ ಸಿದ್ದರಾಮಯ್ಯ

ಟ್ವೀಟ್‌ ಮೂಲಕ ಸಿದ್ಧರಾಮಯ್ಯ ಕಿಡಿಕಾರಿದ್ದು, ಇದು ನೆಹರೂ ಅವರಿಗೆ ಮಾಡಿರುವ ನೇರ ಅವಮಾನ ಎಂದಿದ್ದಾರೆ. ಬೊಮ್ಮಾಯಿಯಂಥ ಮುಖ್ಯಮಂತ್ರಿಯಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈಗ ಬೊಮ್ಮಾಯಿ ಇತಿಹಾಸವನ್ನೇ ತಿರುಚುವ ಪ್ರಯತ್ನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more