Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more