Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more