Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more