Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more