Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more