Dhruva Narayan: ಭಾರೀ ರೋಚಕವಾಗಿದ್ದ ಧ್ರುವನಾರಾಯಣ ರಾಜಕೀಯ ಜರ್ನಿ..!

Dhruva Narayan: ಭಾರೀ ರೋಚಕವಾಗಿದ್ದ ಧ್ರುವನಾರಾಯಣ ರಾಜಕೀಯ ಜರ್ನಿ..!

Published : Mar 12, 2023, 05:42 PM IST

ಎಲ್ಲ ಪಕ್ಷದ ನಾಯಕರಿಗೆ ಅಚ್ಚುಮೆಚ್ಚಿನ ಲೀಡರ್..!
ಬಿಜೆಪಿ- ಜೆಡಿಎಸ್ ನಾಯಕರಿಂದಲೂ ಸಂತಾಪ..!
ಧ್ರುವನಾರಾಯಣ ನೆನೆದು ಡಿಕೆಶಿ ಭಾವುಕ..!

ಬೆಂಗಳೂರು (ಮಾ.12): ಒಂದು ದಿನದ ಮುಂಚೆ ಬಿಡುವಿಲ್ಲದ ಪ್ರಚಾರ ಮಾಡಿ ಪಕ್ಷಕ್ಕಾಗಿ ಬೆವರಿಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್‌ ಬೆಳಗ್ಗೆ ಏಳುತ್ತಲೇ ವಿಧಿವಶ ಆಗಿದ್ದಾರೆ. ಒಂದು ವೋಟಿನ ಗೆಲುವಿನ ದಾಖಲೆ ಬರೆದಿದ್ದ ಹಸನ್ಮುಖಿ ನಾಯಕ ಕಣ್ಮರೆ ಆಗಿದ್ದು, ಅವರ ರಾಜಕೀಯ ಜರ್ನಿ ಭಾರೀ ರೋಚಕವಾಗಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾರ್ಯಾಧ್ಯಕ್ಷ ಧ್ರುವಾನಾರಯಣ ಅವರ ಕಾರ್ಯವೈಖರಿಗೆ ಮೆಚ್ಚಿದ್ದರು. ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಧ್ರುವ ನಾರಾಯಣ ಅವರ ಕಾರ್ಯವೈಖರಿಯನ್ನು ನೆನೆದು ಡಿ.ಕೆ ಶಿವಕುಮಾರ್‌ ಗಳಗಳನೆ ಕಣ್ಣೀರು ಸುರಿಸಿ ಅತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ‘ಧ್ರುವ’ತಾರೆ ಧ್ರುವನಾರಾಯಣ್‌ ಮರೆಯಾಗಿದ್ದಾರೆ ಎಂಬ ಕಂಬನಿ ಎಲ್ಲ ಪಕ್ಷಗಳ ನಾಯಕರಿಂದಲೂ ಕೇಳಿಬಂದಿದೆ.

ಧ್ರುವನಾರಾಯಣ ಅಂತ್ಯಕ್ರಿಯೆ ಮುನ್ನ ಪುತ್ರನಿಗೆ ಕೈ ಟಿಕೆಟ್‌ ಘೋಷಿಸಿ: ಕಾಂಗ್ರೆಸ್‌ಗೆ ಪೀಕಲಾಟ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಮಾಜಿ ಸಂಸದ ಧ್ರವ ನಾರಾಯಣ್‌ ಇನ್ನು ನೆನಪು ಮಾತ್ರ. ಹಠಾತ್ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ರಾಜಕಾರಣದಲ್ಲಿ ಅತ್ಯಂತ ಸಜ್ಜನ ಹಾಗೂ ಸರಳ ರಾಜಕಾರಣಿ ಅಂತಲೇ ಗುರುತಿಸಿಕೊಂಡಿದ್ದ ಧ್ರುವನಾರಾಯಣ್ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತ ತಂದಿದೆ. ಮರೆಯಾದ ಧೃವ ತಾರೆಯನ್ನು ನೆನೆದು ಎಲ್ಲಾ ಪಕ್ಷದ ನಾಯರು ಕಂಬನಿ ಮಿಡಿದಿದ್ದಾರೆ. ಹಾಗಾದ್ರೆ ಬನ್ನಿ ಅಗಲಿದ ಧೃವ ತಾರೆಯ ರಾಜಕೀಯ ಹಾದಿ ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಧೃವ ನಾರಾಯಣ್ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದರು. ಕೇವಲ ಒಂದೇ ಒಂದು ಮತದಿಂದ ರೋಚಕವಾಗಿ ಗೆದ್ದು, ದೇಶದಾದ್ಯಂತ  ಸುದ್ದಿಯಾಗಿದ್ದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more