Dhruva Narayan: ಭಾರೀ ರೋಚಕವಾಗಿದ್ದ ಧ್ರುವನಾರಾಯಣ ರಾಜಕೀಯ ಜರ್ನಿ..!

Dhruva Narayan: ಭಾರೀ ರೋಚಕವಾಗಿದ್ದ ಧ್ರುವನಾರಾಯಣ ರಾಜಕೀಯ ಜರ್ನಿ..!

Published : Mar 12, 2023, 05:42 PM IST

ಎಲ್ಲ ಪಕ್ಷದ ನಾಯಕರಿಗೆ ಅಚ್ಚುಮೆಚ್ಚಿನ ಲೀಡರ್..!
ಬಿಜೆಪಿ- ಜೆಡಿಎಸ್ ನಾಯಕರಿಂದಲೂ ಸಂತಾಪ..!
ಧ್ರುವನಾರಾಯಣ ನೆನೆದು ಡಿಕೆಶಿ ಭಾವುಕ..!

ಬೆಂಗಳೂರು (ಮಾ.12): ಒಂದು ದಿನದ ಮುಂಚೆ ಬಿಡುವಿಲ್ಲದ ಪ್ರಚಾರ ಮಾಡಿ ಪಕ್ಷಕ್ಕಾಗಿ ಬೆವರಿಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ್‌ ಬೆಳಗ್ಗೆ ಏಳುತ್ತಲೇ ವಿಧಿವಶ ಆಗಿದ್ದಾರೆ. ಒಂದು ವೋಟಿನ ಗೆಲುವಿನ ದಾಖಲೆ ಬರೆದಿದ್ದ ಹಸನ್ಮುಖಿ ನಾಯಕ ಕಣ್ಮರೆ ಆಗಿದ್ದು, ಅವರ ರಾಜಕೀಯ ಜರ್ನಿ ಭಾರೀ ರೋಚಕವಾಗಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾರ್ಯಾಧ್ಯಕ್ಷ ಧ್ರುವಾನಾರಯಣ ಅವರ ಕಾರ್ಯವೈಖರಿಗೆ ಮೆಚ್ಚಿದ್ದರು. ಹಳೇ ಮೈಸೂರು ಪ್ರಾಂತ್ಯದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಧ್ರುವ ನಾರಾಯಣ ಅವರ ಕಾರ್ಯವೈಖರಿಯನ್ನು ನೆನೆದು ಡಿ.ಕೆ ಶಿವಕುಮಾರ್‌ ಗಳಗಳನೆ ಕಣ್ಣೀರು ಸುರಿಸಿ ಅತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ‘ಧ್ರುವ’ತಾರೆ ಧ್ರುವನಾರಾಯಣ್‌ ಮರೆಯಾಗಿದ್ದಾರೆ ಎಂಬ ಕಂಬನಿ ಎಲ್ಲ ಪಕ್ಷಗಳ ನಾಯಕರಿಂದಲೂ ಕೇಳಿಬಂದಿದೆ.

ಧ್ರುವನಾರಾಯಣ ಅಂತ್ಯಕ್ರಿಯೆ ಮುನ್ನ ಪುತ್ರನಿಗೆ ಕೈ ಟಿಕೆಟ್‌ ಘೋಷಿಸಿ: ಕಾಂಗ್ರೆಸ್‌ಗೆ ಪೀಕಲಾಟ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಮಾಜಿ ಸಂಸದ ಧ್ರವ ನಾರಾಯಣ್‌ ಇನ್ನು ನೆನಪು ಮಾತ್ರ. ಹಠಾತ್ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ರಾಜಕಾರಣದಲ್ಲಿ ಅತ್ಯಂತ ಸಜ್ಜನ ಹಾಗೂ ಸರಳ ರಾಜಕಾರಣಿ ಅಂತಲೇ ಗುರುತಿಸಿಕೊಂಡಿದ್ದ ಧ್ರುವನಾರಾಯಣ್ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತ ತಂದಿದೆ. ಮರೆಯಾದ ಧೃವ ತಾರೆಯನ್ನು ನೆನೆದು ಎಲ್ಲಾ ಪಕ್ಷದ ನಾಯರು ಕಂಬನಿ ಮಿಡಿದಿದ್ದಾರೆ. ಹಾಗಾದ್ರೆ ಬನ್ನಿ ಅಗಲಿದ ಧೃವ ತಾರೆಯ ರಾಜಕೀಯ ಹಾದಿ ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಧೃವ ನಾರಾಯಣ್ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದರು. ಕೇವಲ ಒಂದೇ ಒಂದು ಮತದಿಂದ ರೋಚಕವಾಗಿ ಗೆದ್ದು, ದೇಶದಾದ್ಯಂತ  ಸುದ್ದಿಯಾಗಿದ್ದರು. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more