Dec 11, 2019, 2:51 PM IST
ಬೆಂಗಳೂರು (ಡಿ.11): ಕಳೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು ಬುಧವಾರ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತಪುರ ಶಾಸಕ ಎಸ್,ಟಿ. ಸೋಮಶೇಖರ್, ಸಚಿವ ಸಂಪುಟ ವಿಸ್ತರಣೆಯ ಕುರಿತು ತಮ್ಮ ನಿಲುವನ್ನು ತಿಳಿಸಿದರು.
ಕಾಂಗ್ರೆಸ್-ಜೆಡಿಎಸ್ನಿಂದ ಹೊರಬಂದ 17 ಶಾಸಕರೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರನ್ನೂ ಕೈಬಿಡುವ ಪ್ರಶ್ನೆಯಿಲ್ಲ, ಎಂದು ಅವರು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೂ ಅವರು ಮಾತನಾಡಿದರು. ಬನ್ನಿ ಅವರು ಏನು ಹೇಳಿದ್ದಾರೆ ಕೇಳೋಣ,,,,