ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

Published : Oct 25, 2023, 05:57 PM IST

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಪಥದ ಹಿಂದೆ ಭಾರಿ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ. 

ಬೆಂಗಳೂರು (ಅ.25): ರಾಜ್ಯ ರಾಜಕಾರಣದ ಅತೀ ದೊಡ್ಡ ದುಷ್ಮನಿಗೆ ಸಿಕ್ಕಿದೆ ರೋಚಕ ತಿರುವು. ದಳಪತಿ ಕುಮಾರಸ್ವಾಮಿಗೆ ಕನಕವ್ಯೂಹದ ಮೂಲಕ ಟಕ್ಕರ್ ಕೊಡಲು ಮುಂದಾದ್ರು ಕನಕಾಧಿಪತಿ. ಡಿಕೆಶಿ ಕರ್ಮಭೂಮಿ ಕನಕಪುರ ಇನ್ನು ಮುಂದೆ ಬೆಂಗಳೂರು ಜಿಲ್ಲೆಗೆ ಸೇರಲಿದ್ಯಂತೆ. ಎಲ್ಲಿಯ ಬೆಂಗಳೂರು, ಎಲ್ಲಿಯ ಕನಕಪುರ..? ಅಷ್ಟಕ್ಕೂ ರಾಮನಗರ ಜಿಲ್ಲೆಯಿಂದ ಕನಕಪುರವನ್ನು ಬೇರ್ಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿರೋದ್ಯಾಕೆ..? ಡಿಕೆ ಶಿವಕುಮಾರ್ ಅವರ ಕರ್ಮಭೂಮಿ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಹೊರಟು ನಿಂತಿದ್ದಾರೆ.

ಹುಲಿ ಉಗುರು ಪೆಂಡೆಂಟ್‌ ಧರಿಸಿದ ನಟ ಜಗ್ಗೇಶ್, ದರ್ಶನ್‌ಗೆ ಅರಣ್ಯ ಇಲಾಖೆ ನೋಟಿಸ್‌: ನಿಖಿಲ್‌ ಕುಮಾರಸ್ವಾಮಿ ಬಚಾವ್‌!

ಕನಕಪುರ ಡಿಕೆ ಶಿವಕುಮಾರ್ ಅವರ ಕರ್ಮಭೂಮಿ. ರಾಮನಗರ ಕುಮಾರಸ್ವಾಮಿಯವರ ರಾಜಕೀಯ ಶಕ್ತಿಕೇಂದ್ರ. ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಡಿಸಿಎಂ ಡಿಕೆಶಿ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ವಿಜಯದಶಮಿಯ ದಿನ ಡಿಸಿಎಂ ಡಿಕೆ ಶಿವಕುಮಾರ್ ನೀಡಿರೋ ಹೇಳಿಕೆ, ಕನಕಾಧಿಪತಿ ಮತ್ತು ದಳಪತಿ ಮಧ್ಯೆ ಹೊಸ ರಾಜಕೀಯ ಸಮರಕ್ಕೆ ಮುನ್ನುಡಿ ಬರೆದಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more