ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿಯೇ ಬಾದ್‌ಶಾ; 'ಶಾ'ಶಾಸನಕ್ಕೆ ಈಶ್ವರಪ್ಪ ಅಪಸ್ವರವೇಕೆ.?

Sep 5, 2021, 12:06 PM IST

ಬೆಂಗಳೂರು (ಸೆ. 05): ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಬಿಜೆಪಿಯಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. 

ಬೊಮ್ಮಾಯಿ ನಾಯಕತ್ವದಲ್ಲಿ ಎಲೆಕ್ಷನ್; ಅಮಿತ್ ಶಾ ಹೇಳಿಕೆಗೆ ಈಶ್ವರಪ್ಪ ಅಪಸ್ವರ!

ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎಂದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂ ಸಾಮೂಹಿಕ ನಾಯಕತ್ವದ ಬಗ್ಗೆ ಎಲ್ಲರಿಗೂ ಒಲವಿದ್ದು, ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲೇ ಎದುರಿಸುತ್ತೇವೆ. ಈ ಬಗ್ಗೆ ಒಟ್ಟಿಗೆ ಕುಳಿತು ನಾವೆಲ್ಲಾ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತ ನಮ್ಮೆಲ್ಲರ ಒಲವು ಇದೆ. ಇದರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಪಾತ್ರ ಕೂಡ ಮುಖ್ಯವಾಗಿ ಇರುತ್ತದೆ. ಆದರೂ ನಾವು ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ ಎಂದಿದ್ದಾರೆ.