News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

Published : Sep 22, 2023, 11:59 PM ISTUpdated : Sep 23, 2023, 12:00 AM IST


ಇಡೀ ಕರುನಾಡಿಗೆ ಕಾವೇರಿ ಸಂಕಟ ಎದುರಾಗಿದ್ದರೆ, ಸರ್ಕಾರ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಆಗಬಹುದಾದ ಕಂಟಕದ ಬಗ್ಗೆ ಯೋಚನೆ ಮಾಡುತ್ತಿದೆ. ಕಾವೇರಿ ವಿಚಾರವಾಗಿ ಇದು ರಾಜ್ಯದ 10 ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಬೆಂಗಳೂರು (ಸೆ.22): ಕಾವೇರಿ ನದಿ ನೀರು ವಿಚಾರವಾಗಿ  ಕಾವೇರಿ ಕೊಳ್ಳದಲ್ಲಿ ಜಿಲ್ಲೆಗಳಲ್ಲಿ ಜಲಯುದ್ಧ ರೋಷಾಗ್ನಿ ಆರಂಭವಾಗಿದೆ. ಕಾವೇರಿ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀ ಧುಮುಕಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ರೈತ ಹಿತರಕ್ಷಣಾ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ನೀಡಿದ್ದಾರೆ. ಇದೇ ವೇಳೆ ರೈತ ಹೋರಾಟಕ್ಕೆ ನಟ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ.

ಕಾವೇರಿ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕೆ ರೈತರು ಬೇಡಿಕೆ ಇಟ್ಟಿದ್ದಾರೆ. ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಮಂಡ್ಯಸಿಟಿ ಬಂದ್‌ಗೆ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದೆ. ‘ತಮಿಳುನಾಡಿಗೆ ಪ್ರತಿವರ್ಷ 419 ಟಿಎಂಸಿ ಕಾವೇರಿ ನೀರು. ಕರ್ನಾಟಕಕ್ಕೆ ಪ್ರತಿವರ್ಷ 270TMC ನಿಗದಿ ಮಾಡಲಾಗಿದೆ. ‌ಮಳೆ ಕಡಿಮೆ ಸಂಧರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು.ಮಳೆ ಕಡಿಮೆಯಾಗಿ ಈ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ.  ಬೆಳೆ‌ ಒಣಗುವುದು ಒಂದೆಡೆ ಆದರೆ ಮನುಷ್ಯನೇ ಒಣಗಿ ಹೋಗ್ತಾನೆ' ಎಂದು ನಿರ್ಮಲಾನಂದ ಶ್ರೀ ಹೇಳಿದ್ದಾರೆ.

ವರನಟ ರಾಜ್‌ಕುಮಾರ್‌ ಬಳಿಕ ಕಾವೇರಿ ಹೋರಾಟಕ್ಕಿಳಿದ ದೊಡ್ಡಮನೆ ಕುಡಿ: ಪ್ರಾಣಾನೇ ಮುಡಿಪಾಗಿಡೋದಾಗಿ ಪ್ರಮಾಣ

ಇನ್ನೊಂದೆಡೆ ರಾಜ್ಯ ಸರ್ಕಾರಕ್ಕೆ ರಾಜಕೀಯ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ತಲೆನೋವಾಗಿದೆ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಜಿಡಿಎಸ್ ನಾಯಕರು ಮೈತ್ರಿಯನ್ನು ಪಕ್ಕಾ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಸೀಟು ಹಂಚಿಕೆ ಚರ್ಚೆ ಆರಂಭವಾಗಬೇಕಿದೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?