News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

Published : Sep 22, 2023, 11:59 PM ISTUpdated : Sep 23, 2023, 12:00 AM IST


ಇಡೀ ಕರುನಾಡಿಗೆ ಕಾವೇರಿ ಸಂಕಟ ಎದುರಾಗಿದ್ದರೆ, ಸರ್ಕಾರ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಆಗಬಹುದಾದ ಕಂಟಕದ ಬಗ್ಗೆ ಯೋಚನೆ ಮಾಡುತ್ತಿದೆ. ಕಾವೇರಿ ವಿಚಾರವಾಗಿ ಇದು ರಾಜ್ಯದ 10 ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಬೆಂಗಳೂರು (ಸೆ.22): ಕಾವೇರಿ ನದಿ ನೀರು ವಿಚಾರವಾಗಿ  ಕಾವೇರಿ ಕೊಳ್ಳದಲ್ಲಿ ಜಿಲ್ಲೆಗಳಲ್ಲಿ ಜಲಯುದ್ಧ ರೋಷಾಗ್ನಿ ಆರಂಭವಾಗಿದೆ. ಕಾವೇರಿ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀ ಧುಮುಕಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ರೈತ ಹಿತರಕ್ಷಣಾ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ನೀಡಿದ್ದಾರೆ. ಇದೇ ವೇಳೆ ರೈತ ಹೋರಾಟಕ್ಕೆ ನಟ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ.

ಕಾವೇರಿ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕೆ ರೈತರು ಬೇಡಿಕೆ ಇಟ್ಟಿದ್ದಾರೆ. ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಮಂಡ್ಯಸಿಟಿ ಬಂದ್‌ಗೆ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದೆ. ‘ತಮಿಳುನಾಡಿಗೆ ಪ್ರತಿವರ್ಷ 419 ಟಿಎಂಸಿ ಕಾವೇರಿ ನೀರು. ಕರ್ನಾಟಕಕ್ಕೆ ಪ್ರತಿವರ್ಷ 270TMC ನಿಗದಿ ಮಾಡಲಾಗಿದೆ. ‌ಮಳೆ ಕಡಿಮೆ ಸಂಧರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು.ಮಳೆ ಕಡಿಮೆಯಾಗಿ ಈ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ.  ಬೆಳೆ‌ ಒಣಗುವುದು ಒಂದೆಡೆ ಆದರೆ ಮನುಷ್ಯನೇ ಒಣಗಿ ಹೋಗ್ತಾನೆ' ಎಂದು ನಿರ್ಮಲಾನಂದ ಶ್ರೀ ಹೇಳಿದ್ದಾರೆ.

ವರನಟ ರಾಜ್‌ಕುಮಾರ್‌ ಬಳಿಕ ಕಾವೇರಿ ಹೋರಾಟಕ್ಕಿಳಿದ ದೊಡ್ಡಮನೆ ಕುಡಿ: ಪ್ರಾಣಾನೇ ಮುಡಿಪಾಗಿಡೋದಾಗಿ ಪ್ರಮಾಣ

ಇನ್ನೊಂದೆಡೆ ರಾಜ್ಯ ಸರ್ಕಾರಕ್ಕೆ ರಾಜಕೀಯ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ತಲೆನೋವಾಗಿದೆ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಜಿಡಿಎಸ್ ನಾಯಕರು ಮೈತ್ರಿಯನ್ನು ಪಕ್ಕಾ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಸೀಟು ಹಂಚಿಕೆ ಚರ್ಚೆ ಆರಂಭವಾಗಬೇಕಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!