ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಪದಗ್ರಹಣ!

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಪದಗ್ರಹಣ!

Published : Mar 28, 2022, 07:46 PM IST

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಅಧಿಕಾರ ಸ್ವೀಕಾರ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮ

ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಒಂದು ತಿಂಗಳ ಬಳಿಕ ಅಧಿಕೃತವಾಗಿ ಜವಾಬ್ದಾರಿ

ಬೆಂಗಳೂರು (ಮಾ. 28): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನ (Congress) ಹಿರಿಯ ನಾಯಕ ಎಂಬಿ ಪಾಟೀಲ್  (Senior Leader MB Patil)ಸೋಮವಾರ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡರು. ಪ್ರಚಾರ ಸಮಿತಿಯ ಅಧ್ಯಕ್ಷರಾಗಿ (campaign committee chairman ) ಆಯ್ಕೆಯಾದ ಒಂದು ತಿಂಗಳ ಬಳಿಕ ಎಂಬಿ ಪಾಟೀಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾಜಿ ಸಚಿವ ಅಧಿಕಾರ ವಹಿಸಿಕೊಂಡರು.

ಭಾರತ್ ಮಾತಾ ಕಿ ಜೈ ಎನ್ನುತ್ತಲೇ ಭಾಷಣ ಆರಂಭಿಸಿದ ಎಂಬಿ ಪಾಟೀಲ್, ಬಿಜೆಪಿಯ (BJP) ಯಾರೊಬ್ಬರೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಇಂಥ ಪಕ್ಷ ಈಗ ನಮಗೆ ರಾಷ್ಟ್ರೀಯತೆಯ ಪಾಠ ಮಾಡಲು ಬಂದಿದೆ. ಸರ್ವರಿಗೂ ಸಮಪಾಲು ಸಿದ್ಧಾಂತವನ್ನು ನಂಬಿರುವ ಕಾಂಗ್ರೆಸ್ ಪಕ್ಷ, ಈ ದೇಶ ಕಟ್ಟುವಲ್ಲಿ ನೀಡಿದ ಕೊಡುಗೆಯನ್ನು ಯಾರೊಬ್ಬರೂ ಮರೆಯುವಂತಿಲ್ಲ ಎಂದು ಹೇಳಿದರು.

ಬಳ್ಳಾರಿ ಮೇಯರ್ ಎಲೆಕ್ಷನ್, ಬಹುಮತ ಇದ್ರು ಕಾಂಗ್ರೆಸ್‌ನಲ್ಲಿ ಮೂಡದ ಒಮ್ಮತ, ಡಿಕೆಶಿ ಪಾಠ

ಇಂದು ಅಧಿಕಾರಕ್ಕೋಸ್ಕರ ಬಿಜೆಪಿ ಸಮಾಜದ ನಡುವೆ ಸಂಘರ್ಷ ಮೂಡಿಸುವ ಕೆಲಸ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಸಮಾಜವನ್ನು ಕಟ್ಟುವ ಕೆಲಸ ಮಾಡಲಿದೆ. ಜಾತಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯಲು ನಾವು ಬಿಡುವುದಿಲ್ಲ ಎಂದು ಎಂಬಿ ಪಾಟೀಲ್ ಹೇಳಿದರು. ಸಮಾರಂಭದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more