ಕರ್ನಾಟಕ ಕುರುಕ್ಷೇತ್ರ: ಒಂದೇ ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ?

ಕರ್ನಾಟಕ ಕುರುಕ್ಷೇತ್ರ: ಒಂದೇ ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ?

Published : Mar 11, 2023, 07:25 PM IST

ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಶನಿವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. 

ಬೆಂಗಳೂರು (ಮಾ.11): ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ 2023ಗೆ ಚುನಾವಣಾ ಆಯೋಗ ನಡೆಸಿರುವ ಸಿದ್ಧತೆಯ ಕುರಿತು ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹಲವಾರು ಮಾಹಿತಿ ಸಂಗ್ರಹ ಮಾಡಿದ್ದೇವೆ. ಮೇ. 24ರ ಒಳಗಾಗಿ ಹೊಸ ಸರ್ಕಾರ ರಚನೆಯಾಗಬೇಕಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 5.21 ಕೋಟಿ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು. ಗ್ರಾಮಾಂತರದಲ್ಲಿ ಈ ಬಾರಿ ಶೇ. 80ರಷ್ಟು ಹೆಚ್ಚಿನ ಮತದಾನವಾಗುವ ನಿರೀಕ್ಷೆ ಇದೆ. ಇನ್ನು ಚುನಾವಣಾ ಸಮಾವೇಶಗಳಿಗೆ ಆನ್‌ಲೈನ್‌ನಲ್ಲೂ ಅನುಮತಿಗೆ ಅರ್ಜಿ ಸಲ್ಲಿಸಬಹುದು. ನಾಮಪತ್ರ ಆನ್‌ಲೈನ್‌ನಲ್ಲೂ ಸಲ್ಲಿಸುವ ಅವಕಾಶವಿದೆ ಎಂದು ಹೇಳಿದ್ದಾರೆ. 2.62 ಕೋಟಿ ಪುರುಷ ಮತದಾರರು ರಾಜ್ಯದಲ್ಲಿದ್ದರೆ, ಮಹಿಳಾ ಮತದಾರರು 2.59 ಕೋಟಿ ಇದ್ದಾರೆ. ಅದರೊಂದಿಗೆ ರಾಜ್ಯದಲ್ಲಿ 100 ವರ್ಷ ಮೇಲ್ಪಟ್ಟ 16, 796 ಮತದಾರರಿದ್ದಾರೆ. ಕಳೆದ ಬಾರಿ ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗಿತ್ತು. ಈ ಬಾರಿ ಮತದಾನ ಪ್ರಮಾಣವನ್ನು ಏರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ಈ ನಡುವೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಮನವಿ ಬಂದಿದ್ದು, ಈ ಕುರಿತಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 4,699 ತೃತೀಯ ಲಿಂಗಿ ಮತದಾರರಿದ್ದಾರೆ. 9.17 ಲಕ್ಷ ಮಂದಿ ಇದೇ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಇನ್ನೂ 80 ವರ್ಷಕ್ಕಿಂತ ಹೆಚ್ಚಿನ 12.15 ಲಕ್ಷ ಮತದಾರರಿದ್ದರೆ. 5.55 ಲಕ್ಷ ವಿಕಲಚೇತನ ಮತದಾರರಿದ್ದಾರೆ. ಮೊದಲ ಬಾರಿಯ ಮನೆಯಲ್ಲೇ‌ ಮತದಾನ ಮಾಡುವ ಅವಕಾಶವನ್ನೂ ಈ ಬಾರಿ ನೀಡಲಾಗುತ್ತದೆ. 80 ವರ್ಷ ಮೇಲ್ಪಟ್ಟಿರುವ ಮತ್ತು ವಿಕಲಚೇತನರಿಗೆ ಮನೆಯಲ್ಲೇ ಮತದಾನದ ‌ಮಾಡುವ ಅವಕಾಶ ಇರಲಿದೆ. ಮತಗಟ್ಟೆಗೆ ಬರಲು ಸಾದ್ಯವಾಗದವರಿಗೆ ವಯೋವೃದ್ದರು, ಅಂಗವಿಕಲರಿಗೆ ಮನೆಯಲ್ಲೇ ವೋಟಿಂಗ್ ಸೌಲಭ್ಯ ಇರಲಿದೆ ಎಂದು ಮಾಹಿತಿ ನೀಡಿದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more