Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Watch Video: ಹೇಗಿದೆ ಕೋಲಾರ ಮತದಾರರ ಲೆಕ್ಕಾಚಾರ..? ಅಸೆಂಬ್ಲಿಯಲ್ಲಿನ ಹೊಂದಾಣಿಕೆ ಲೋಕಸಭೆ ಹೊತ್ತಿಗೆ ಮಾಯವಾಗಿದ್ದೇಕೆ?

Published : Mar 31, 2024, 11:32 AM ISTUpdated : Mar 31, 2024, 11:33 AM IST

ಕಾಂಗ್ರೆಸ್ ಫೈಟ್ ಮತ್ತು ಬಿಜೆಪಿ, ಜೆಡಿಎಸ್ ಯಾರಿಗೆ ಲಾಭ..?
ಕೋಲಾರ ಟಿಕೆಟ್ ಫೈಟ್.. ಮೂರನೇಯವ್ರಿಗೆ ಸಿಕ್ತು ಟಿಕೆಟ್‌
ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಮಿಸ್

ಬಿಜೆಪಿಯ 25 ಮತ್ತು ಜೆಡಿಎಸ್‌ನ 3 ಹಾಗೂ ಕಾಂಗ್ರೆಸ್‌ನ ಎಲ್ಲ 28 ಕ್ಷೇತ್ರಗಳಿಗೆ ಟಿಕೆಟ್(Ticket) ಡಿಕ್ಲೇರ್ ಆಗಿದೆ. ಕಟ್ಟಕಡೆಯದಾಗಿ ಹೊರಬಿದ್ದಿರೋದು ಕೋಲಾರ ಕಾಂಗ್ರೆಸ್ ಟಿಕೆಟ್. ಕಾಂಗ್ರೆಸ್(Congress) ಟಿಕೆಟ್ ಗೆದ್ದಿರೋದು ಕೆ.ವಿ.ಗೌತಮ್(KV Gautam). ಟಿಕೆಟ್ ಫೈಟ್‌ನ 3ನೇ ಕ್ಲೈಮಾಕ್ಸ್ ಅನ್ನೋದಕ್ಕೆ ಕಾರಣ ಇದೆ. ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದೆ. ಸಚಿವ ಮುನಿಯಪ್ಪ(Muniyappa) ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೂ ಸಿಕ್ಕಿಲ್ಲ. ಎಲ್. ಹನುಮಂತಯ್ಯ ಅವರಿಗೂ ಕೊಟ್ಟಿಲ್ಲ. ಎರಡೂ ಬಣಕ್ಕೆ ಸೇರದ ಮೂರನೇ ವ್ಯಕ್ತಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆ ನಿಜವಾಗಿದೆ.ಈ ಬಣ ಬಡಿದಾಟ ಇವತ್ತಿನದ್ದಲ್ಲ. ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಶಾಸಕರು ರಾಜೀನಾಮೆ ಕೊಡೋ ಡ್ರಾಮಾ. ಜಸ್ಟ್ ಸ್ಯಾಂಪಲ್ ಅಷ್ಟೆ. ಮೊನ್ನೆ ಮೊನ್ನೆ ನಡೆದ ಆ ರೇಂಜಿನ ಬಂಡಾಯವನ್ನ ಸಿಎಂ ಸಿದ್ದರಾಮಯ್ಯ ಅವರಾಗ್ಲೀ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಾಗ್ಲೀ ನಿರೀಕ್ಷೆಯನ್ನೂ ಮಾಡಿರಲಿಲ್ಲ. ಆದರೆ ಯಾವಾಗ ಸಚಿವ ಎಂಸಿ ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ಕೆವೈ ನಂಜೇಗೌಡ ಹಾಗು ಪರಿಷತ್ ಸಂಸದರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ಅವರೆಲ್ಲ ಒಟ್ಟಾಗಿ ರಾಜೀನಾಮೆ ಕೊಡೋಕೆ ಬಂದ್ರೋ.. ಆಗ ಕೋಲಾರ ಟಿಕೆಟ್ ಫೈಟ್ ಇಡೀ ದೇಶಕ್ಕೇ ಗೊತ್ತಾಯ್ತು. ಯಾಕಂದ್ರೆ ಅವರು ಕೇಂದ್ರದಲ್ಲಿಯೂ ಸಚಿವರಾಗಿದ್ದ,  ಹಾಲಿ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಸಿಡಿದೆದ್ದು ನಿಂತಿದ್ದರು.

ಇದನ್ನೂ ವೀಕ್ಷಿಸಿ:  ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more