Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Published : Feb 02, 2022, 10:24 AM ISTUpdated : Feb 02, 2022, 10:25 AM IST

*'ಕೈ' ಪಾಳಯದಲ್ಲಿ ಸಿದ್ದು Vs ಡಿಕೆಶಿ ಅಂತರ್ಯುದ್ಧ
*ಡಿಕೆಶಿ ಬಗ್ಗೆ ಗುಸು ಗುಸು: ಸಿದ್ದು ಆಪ್ತ ಪಟ್ಟಣ್‌ಗೆ ಕೆಪಿಸಿಸಿ ನೋಟಿಸ್‌
*ಕಾರಣ ಕೇಳಿದ  ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ 

ಬೆಂಗಳೂರು (ಫೆ. 02): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K  Shivakumar) ಅವರ ವಿರುದ್ಧ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರ ಆಪ್ತ, ಮಾಜಿ ಶಾಸಕ ಅಶೋಕ್‌ ಪಟ್ಟಣ್‌ ( Ashok Pattanshetti) ಅವರಿಗೆ ಸಮುಜಾಯಿಷಿ ಕೇಳಿ ಕಾಂಗ್ರೆಸ್‌ ಪಕ್ಷ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ ಖಾನ್‌ ಅವರು, ಅಶೋಕ್‌ ಪಟ್ಟಣ್‌ ಅವರಿಗೆ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Karnataka Politcs: ನನ್ನ ಹುದ್ದೆಗೂ, ಇಬ್ರಾಹಿಂ ವಿಚಾರಕ್ಕೂ ಸಂಬಂಧ ಇಲ್ಲ: ಖಾದರ್‌

ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆಗಿ ತಿಳಿದಿರುವವರೂ ಆದ ತಾವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಘನತೆ-ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿಯಾಗುವಂಥ ವಿಚಾರಗಳನ್ನು ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್‌ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ಜತೆಗೆ ಅದು ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ನಡವಳಿಕೆ ಬಗ್ಗೆ ಏಳು ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more