Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Published : Feb 02, 2022, 10:24 AM ISTUpdated : Feb 02, 2022, 10:25 AM IST

*'ಕೈ' ಪಾಳಯದಲ್ಲಿ ಸಿದ್ದು Vs ಡಿಕೆಶಿ ಅಂತರ್ಯುದ್ಧ
*ಡಿಕೆಶಿ ಬಗ್ಗೆ ಗುಸು ಗುಸು: ಸಿದ್ದು ಆಪ್ತ ಪಟ್ಟಣ್‌ಗೆ ಕೆಪಿಸಿಸಿ ನೋಟಿಸ್‌
*ಕಾರಣ ಕೇಳಿದ  ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ 

ಬೆಂಗಳೂರು (ಫೆ. 02): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K  Shivakumar) ಅವರ ವಿರುದ್ಧ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರ ಆಪ್ತ, ಮಾಜಿ ಶಾಸಕ ಅಶೋಕ್‌ ಪಟ್ಟಣ್‌ ( Ashok Pattanshetti) ಅವರಿಗೆ ಸಮುಜಾಯಿಷಿ ಕೇಳಿ ಕಾಂಗ್ರೆಸ್‌ ಪಕ್ಷ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ ಖಾನ್‌ ಅವರು, ಅಶೋಕ್‌ ಪಟ್ಟಣ್‌ ಅವರಿಗೆ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Karnataka Politcs: ನನ್ನ ಹುದ್ದೆಗೂ, ಇಬ್ರಾಹಿಂ ವಿಚಾರಕ್ಕೂ ಸಂಬಂಧ ಇಲ್ಲ: ಖಾದರ್‌

ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆಗಿ ತಿಳಿದಿರುವವರೂ ಆದ ತಾವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಘನತೆ-ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿಯಾಗುವಂಥ ವಿಚಾರಗಳನ್ನು ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್‌ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ಜತೆಗೆ ಅದು ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ನಡವಳಿಕೆ ಬಗ್ಗೆ ಏಳು ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more