Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Published : Feb 02, 2022, 10:24 AM ISTUpdated : Feb 02, 2022, 10:25 AM IST

*'ಕೈ' ಪಾಳಯದಲ್ಲಿ ಸಿದ್ದು Vs ಡಿಕೆಶಿ ಅಂತರ್ಯುದ್ಧ
*ಡಿಕೆಶಿ ಬಗ್ಗೆ ಗುಸು ಗುಸು: ಸಿದ್ದು ಆಪ್ತ ಪಟ್ಟಣ್‌ಗೆ ಕೆಪಿಸಿಸಿ ನೋಟಿಸ್‌
*ಕಾರಣ ಕೇಳಿದ  ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ 

ಬೆಂಗಳೂರು (ಫೆ. 02): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K  Shivakumar) ಅವರ ವಿರುದ್ಧ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರ ಆಪ್ತ, ಮಾಜಿ ಶಾಸಕ ಅಶೋಕ್‌ ಪಟ್ಟಣ್‌ ( Ashok Pattanshetti) ಅವರಿಗೆ ಸಮುಜಾಯಿಷಿ ಕೇಳಿ ಕಾಂಗ್ರೆಸ್‌ ಪಕ್ಷ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ ಖಾನ್‌ ಅವರು, ಅಶೋಕ್‌ ಪಟ್ಟಣ್‌ ಅವರಿಗೆ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Karnataka Politcs: ನನ್ನ ಹುದ್ದೆಗೂ, ಇಬ್ರಾಹಿಂ ವಿಚಾರಕ್ಕೂ ಸಂಬಂಧ ಇಲ್ಲ: ಖಾದರ್‌

ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆಗಿ ತಿಳಿದಿರುವವರೂ ಆದ ತಾವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಘನತೆ-ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿಯಾಗುವಂಥ ವಿಚಾರಗಳನ್ನು ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್‌ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ಜತೆಗೆ ಅದು ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ನಡವಳಿಕೆ ಬಗ್ಗೆ ಏಳು ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more