ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

ಸಿದ್ದು-ಡಿಕೆಶಿ ಬಣಗಳ ನಡುವೆ ಅಧ್ಯಕ್ಷ ಹುದ್ದೆಗಾಗಿ ಫೈಟ್‌: ಕೆಪಿಸಿಸಿ ಹುದ್ದೆ ಮೇಲೆ ರಾಜಣ್ಣ, ಎಂ.ಬಿ.ಪಾಟೀಲ್‌ ಕಣ್ಣು

Published : Jul 01, 2024, 03:52 PM IST

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದಾರೆ.

ಲೋಕಸಭೆ ಫಲಿತಾಂಶ ಬೆನ್ನಲ್ಲೇ ಅಧ್ಯಕ್ಷರ ಬದಲಾವಣೆ ಕೂಗು ಕಾಂಗ್ರೆಸ್‌ನಲ್ಲಿ(Congress) ಜೋರಾಗಿ ಕೇಳಿಬರುತ್ತಿದೆ. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಹುದ್ದೆಗಾಗಿ ಸಚಿವರ ಮಧ್ಯೆ ಸಮರ ಜೋರಾಗಿದೆ. ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌ (DK Shivakumar) ಬಣಗಳ ಮಧ್ಯೆ  ಅಧ್ಯಕ್ಷ ಹುದ್ದೆಗಾಗಿ ಫೈಟ್ ನಡೆಯುತ್ತಿದೆ. ಕೆಪಿಸಿಸಿ ಗಾದಿ ಮೇಲೆ ಕಾಂಗ್ರೆಸ್‌ನ ಹಲವು ನಾಯಕರ ಕಣ್ಣು ಹಾಕಿದ್ದು, ಒಬ್ಬರಿಗೆ ಒಂದೇ ಹುದ್ದೆ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ. ಡಿಕೆಶಿ ಡಿಸಿಎಂ ಆಗಿದ್ದಾರೆ, ಕೆಪಿಸಿಸಿ ಹುದ್ದೆ ಬಿಟ್ಟುಕೊಡಲಿ ಎಂದು ಆಗ್ರಹಿಸುತ್ತಿದ್ದಾರೆ. ಕೆಪಿಸಿಸಿ ಹುದ್ದೆ(KPCC post) ಮೇಲೆ ಸಚಿವರಾದ ರಾಜಣ್ಣ, ಎಂ.ಪಿ.ಪಾಟೀಲ್ ಕಣ್ಣಾಕಿದ್ದಾರೆ. ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ರಾಜಣ್ಣ ಹೇಳಿದ್ದಾರೆ. ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಿ ಎಂದು ಎಂಬಿಪಿ ಒತ್ತಾಯ ಮಾಡಿದ್ದಾರೆ. ಕೆಪಿಸಿಸಿ ಬದಲಾವಣೆ ಬೆನ್ನಲ್ಲೇ ಪದಾಧಿಕಾರಿಗಳ ಜತೆ ಡಿಕೆಶಿ ಚರ್ಚೆ ನಡೆಸಿದ್ದು, ಪದಾಧಿಕಾರಿಗಳ ಸಭೆ ಮೂಲಕ ಡಿಕೆಶಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಣಕ್ಕೆ ಡಿಕೆ ಶಿವಕುಮಾರ್ ಈ ಮೂಲಕ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೌಟುಂಬಿಕ ಕಲಹ ಹಿನ್ನೆಲೆ: ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more