ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

ಪಾಲಿಕೆಗಳಿಗೆ ಎಲೆಕ್ಷನ್ ಘೋಷಣೆ: ಚುನಾವಣೆ ಆಯೋಗದ ವಿರುದ್ಧ ಈಶ್ವರಪ್ಪ ಅಸಮಾಧಾನ

Published : Aug 11, 2021, 10:07 PM IST

ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಬೆಳಗಾವಿ, (ಆ.11): ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು (ಆ.11) ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊವಿಡ್- ಕೊವಿಡ್ ಅಂತಾರೆ ಚುನಾವಣೆ ಘೋಷಣೆ ಮಾಡಿಬಿಟ್ಟಿದ್ದಾರೆ. ಇದಂತೂ ನನಗೆ ಆಶ್ಚರ್ಯ ಮೂಡಿಸಿದೆ ಎಂದು  ಈಶ್ವರಪ್ಪ ಚುನಾವಣಾ ಆಯೋಗದ ನಡೆಗೆ ಅಸಮಾಧಾನ  ಹೊರಹಾಕಿದರು. 

ರಾಜ್ಯದ 3 ನಗರ ಪಾಲಿಕೆ ಚುನಾವಣೆಗೆ ಡೇಟ್ ಫಿಕ್ಸ್: ಯಾವಾಗ ವೋಟಿಂಗ್, ಕೌಂಟಿಂಗ್?

ನಾವು ಇವತ್ತು ರಿಪೋರ್ಟ್ ಕೊಡ್ತಾಇದ್ವಿ ಅಷ್ಟರೊಳಗೆ ಚುನಾವಣೆ ಘೋಷಣೆ ಮಾಡಿದ್ದಾರೆ ನಾನೇನು ಹೇಳಲಿ. ಚುನಾವಣೆ ಆಯೋಗ ತೆಗೆದುಕೊಂಡ ಈ ತೀರ್ಮಾನದ ಬಗ್ಗೆ ನನಗಂತೂ ಸಮಾಧಾನ ಇಲ್ಲ. ಬೆಳಗಾವಿ ಮತ್ತು ಕಲಬುರಗಿ ಗಡಿ ಜಿಲ್ಲೆಗಳಾಗಿವೆ. ಸುತ್ತಮುತ್ತ ಹಳ್ಳಿ ಜನರು ನಗರಕ್ಕೆ ಬಂದು ಹೋಗ್ತಿರ್ತಾರೆ. ಇಂತಹ ಸಂದರ್ಭದಲ್ಲಿ ಇವರು ಚುನಾವಣೆ ಮಾಡಿಕೊಂಡು ಕುಳಿತುಕೊಳ್ಳುತ್ತೇನೆ ಅಂದರೆ ಹೇಗೆ? ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಬೇಸರ ವ್ಯಕ್ತಪಡಿಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?