ಸಕ್ಕರೆ ನಾಡಿನಿಂದ ಸ್ಪರ್ಧೆಗೆ ಎಚ್‌ಡಿಕೆಗೆ ಬಿಜೆಪಿ ಓಪನ್ ಆಫರ್..! ಪುತ್ರನ ಸೋಲಿಗೆ ಸೇಡು ತೀರಿಸಿಕೊಳ್ಳಲು ಪಣ ತೊಟ್ಟರಾ ದಳಪತಿ..?

ಸಕ್ಕರೆ ನಾಡಿನಿಂದ ಸ್ಪರ್ಧೆಗೆ ಎಚ್‌ಡಿಕೆಗೆ ಬಿಜೆಪಿ ಓಪನ್ ಆಫರ್..! ಪುತ್ರನ ಸೋಲಿಗೆ ಸೇಡು ತೀರಿಸಿಕೊಳ್ಳಲು ಪಣ ತೊಟ್ಟರಾ ದಳಪತಿ..?

Published : Dec 30, 2023, 09:07 AM IST

ಮಂಡ್ಯ ರಣರಂಗ ಗೆಲ್ಲಲು "ದಳಪತಿ ದಾಳ"ಉರುಳಿಸಿದ ಕೇಸರಿ ಪಡೆ..!
ಕುಮಾರಸ್ವಾಮಿ ಭೇಟಿಯಾದ ಮಂಡ್ಯ ಜಿಲ್ಲಾ ಬಿಜೆಪಿ ನಾಯಕರು..!
ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಎಚ್‌ಡಿಕೆಗೆ ಆಹ್ವಾನ..!

ಮಂಡ್ಯ, ರಣರಣ ಮಂಡ್ಯ. ರಾಜಕಾರಣ ಅಂತ ಬಂದ್ರೆ ಇಡೀ ಇಂಡಿಯಾದ ಗಮನ ಸೆಳೆಯೋ ಮಂಡ್ಯ(Mandya). ಇದು ನಾಲ್ಕೂವರೆ ವರ್ಷಗಳ ಹಿಂದೆ.. ಅಂದ್ರೆ 2019ರ ಲೋಕಸಭಾ ಚುನಾವಣೆಯ(Loksabha election) ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು(HD Kumaraswamy) ಆಡಿದ್ದ ಮಾತು. ಮಂಡ್ಯ ಬಗ್ಗೆ ಗೊತ್ತು, ಮಂಡ್ಯ ಜನರ ಬಗ್ಗೆ ಗೊತ್ತು. ಮಂಡ್ಯ ಜಿಲ್ಲೆ ನಮ್ಮ ಹೃದಯ ಅಂದಿದ್ರು ಕುಮಾರಣ್ಣ. ಆದ್ರೆ ಅದೇ ಮಂಡ್ಯದಲ್ಲಿ ಜೆಡಿಎಸ್‌ಗೆ(JDS) ಹೃದಯಾಘಾತವಾಗಿದ್ದು, ಕುಮಾರಸ್ವಾಮಿಯವರ ಮಗ ಲೋಕಸಭಾ ಚುನಾವಣೆಯಲ್ಲಿ ಸೋತದ್ದು. ಎಲ್ಲಾ ಈಗ ಇತಿಹಾಸ. 2019ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಮಂಡ್ಯದಿಂದ ಸ್ಪರ್ಧಿಸಿ ಸೋತ ನಂತ್ರ ಕಾವೇರಿ ನದಿಯಲ್ಲಿ ಸಾಕಷ್ಟು ನೀರು ಹರಿದು ಹೋಗಿದೆ. ರಾಜಕೀಯ ಚಿತ್ರಣಗಳು, ಸಮೀಕರಣಗಳು, ಮೈತ್ರಿವ್ಯೂಹಗಳು ಬದಲಾಗಿವೆ. ಅವತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಮಾಡ್ಕೊಂಡು ಲೋಕಸಭಾ ಅಖಾಡಕ್ಕಿಳಿದಿದ್ರೆ, ಈ ಬಾರಿ ಜೆಡಿಎಸ್ ಜೊತೆ ಬಿಜೆಪಿ ದೋಸ್ತಿ ಮಾಡ್ಕೊಂಡಿದೆ. ದಳಪತಿಗಳೊಂದಿಗೆ ದೋಸ್ತಿ ಕುದುರಿದ್ದೇ ತಡ. ಮಂಡ್ಯದ ಬಿಜೆಪಿ ನಾಯಕರು ರಣರೋಚಕ ದಾಳವೊಂದನ್ನು ಉರುಳಿಸಿದ್ದಾರೆ. ಅದೇ ಮಂಡ್ಯ ಗೆಲ್ಲಲು ಕೇಸರಿ ಕಲಿಗಳು ಉರುಳಿಸಿರೋ ದಳಪತಿ ದಾಳ.

ಮಂಡ್ಯ ಅಂದ್ರೆ ರಾಜಕೀಯ ರಣರಂಗ. ರಾಜಕಾರಣ ಅಂತ ಬಂದ್ರೆ ಮಂಡ್ಯ ಇಡೀ ಇಂಡಿಯಾದ ಗಮನವನ್ನು ಸೆಳೆದು ಬಿಡೋ ಅಖಾಡ. ಜಿದ್ದಾಜಿದ್ದಿನ ರಾಜಕೀಯಕ್ಕೆ ಹೆಸರುವಾಸಿಯಾಗಿರೋ ಮಂಡ್ಯದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ಸದ್ದಿಲ್ಲದೆ ತಯಾರಿ ನಡೀತಾ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೇ ಸ್ಪರ್ಧಿಸ್ಬೇಕು ಅನ್ನೋ ಆಗ್ರಹ ಕೇಳಿ ಬಂದಿದೆ. ಅಂದ ಹಾಗೆ, ದಳಪತಿ ಮುಂದೆ ಈ ಆಫರ್ ಇಟ್ಟಿರೋದು ಜೆಡಿಎಸ್'ನವರಲ್ಲ, ಮೈತ್ರಿ ಪಕ್ಷ ಬಿಜೆಪಿ ನಾಯಕರು. ಯೆಸ್.. ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರು ಜಿಲ್ಲಾಧ್ಯಕ್ಷ ಸಿ.ಪಿ ಉಮೇಶ್ ನೇತೃತ್ವದಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಂಡ್ಯದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಅಷ್ಟಕ್ಕೂ ಈ ಭೇಟಿ ವೇಳೆ ಮಂಡ್ಯ ಬಿಜೆಪಿ ನಾಯಕರು ದಳಪತಿ ಮುಂದೆ ಮಾತನಾಡಿದ್ದೇನು ಅನ್ನೋದನ್ನು ಡೀಟೇಲ್ಲಾಗಿ ತೋರಿಸ್ತೀವಿ ನೋಡಿ.

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಇಂದು ಶನಿದೇವರ, ನಾಗನ ಆರಾಧನೆ ಮಾಡಿ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more