Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Published : Feb 16, 2024, 03:16 PM IST

ರಾಜ್ಯಸಭೆ ರಣರಂಗಕ್ಕೆ ರೋಚಕ ತಿರುವು ಕೊಟ್ಟ ದೋಸ್ತಿಗಳ "ಪಂಚ"ತಂತ್ರ..!
ಕಾಂಗ್ರೆಸ್ ಮತಗಳಿಗೆ ಕನ್ನ.. ಕೈಗೆ ದೋಸ್ತಿ ಗುನ್ನ.. ನಡೆಯುತ್ತಾ ಪವಾಡ..?
"ಕಾಂಗ್ರೆಸ್‌ನಲ್ಲಿ ನನಗೆ ಗೆಳೆಯರಿದ್ದಾರೆ.." ಏನಿದು ರೆಡ್ಡಿ ಮಾತಿನ ಮರ್ಮ..?    

ಕಮಲದಳ ನಾಯಕರು ಆಡ್ತಿರೋ ಗೂಢಾರ್ಥದ ಮಾತುಗಳನ್ನು ಕೇಳಿಸ್ಕೊಂಡ್ರಾ. ಇದು ರಾಜ್ಯಸಭಾ(Rajyasabha) ರಣರಂಗದಲ್ಲಿ ಶುರುವಾಗಿರೋ “ಪಂಚ”ಮಂತ್ರ, “ಪಂಚರ್” ತಂತ್ರದ ರೋಚಕ ಸ್ಟೋರಿ. ಫೆಬ್ರವರಿ 27ರಂದು ನಡೆಯಲಿರೋ ರಾಜ್ಯಸಭಾ ಚುನಾವಣೆ, ರಾಜ್ಯದಲ್ಲಿ ರೋಚಕ ತಿರುವು ಪಡೆದುಕೊಂಡಿದೆ. ಕಾರಣ, ಬಿಜೆಪಿ(BJP)-ಜೆಡಿಎಸ್(JDS) ದೋಸ್ತಿ ಪಾಳೆಯದಿಂದ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸದ್ಯದ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ ಒಂದು ಸ್ಥಾನ ಅನ್ನೋದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಕಾಂಗ್ರೆಸ್'ನಿಂದ ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ ಇಡೀ ರಾಜ್ಯಸಭೆ ಅಖಾಡವನ್ನು ರಣರಂಗವಾಗಿಸಿರೋದು ದೋಸ್ತಿ ಪಾಳೆಯದಿಂದ ಸಿಡಿದಿರೋ ಪಂಚಂತ್ರ. ಯೆಸ್.. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಬಿಜೆಪಿ-ಜೆಡಿಎಸ್'ನ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ವೀಕ್ಷಿಸಿ:  ಸಿಎಂ ಸುದೀರ್ಘ ಬಜೆಟ್‌ ಮಂಡನೆ: ಲೋಕಸಭಾ ಚುನಾವಣಾ ಮತಬೇಟೆಗೆ ಪೂರಕವಾಗಿ ಅನುದಾನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more