Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Published : Feb 16, 2024, 03:16 PM IST

ರಾಜ್ಯಸಭೆ ರಣರಂಗಕ್ಕೆ ರೋಚಕ ತಿರುವು ಕೊಟ್ಟ ದೋಸ್ತಿಗಳ "ಪಂಚ"ತಂತ್ರ..!
ಕಾಂಗ್ರೆಸ್ ಮತಗಳಿಗೆ ಕನ್ನ.. ಕೈಗೆ ದೋಸ್ತಿ ಗುನ್ನ.. ನಡೆಯುತ್ತಾ ಪವಾಡ..?
"ಕಾಂಗ್ರೆಸ್‌ನಲ್ಲಿ ನನಗೆ ಗೆಳೆಯರಿದ್ದಾರೆ.." ಏನಿದು ರೆಡ್ಡಿ ಮಾತಿನ ಮರ್ಮ..?    

ಕಮಲದಳ ನಾಯಕರು ಆಡ್ತಿರೋ ಗೂಢಾರ್ಥದ ಮಾತುಗಳನ್ನು ಕೇಳಿಸ್ಕೊಂಡ್ರಾ. ಇದು ರಾಜ್ಯಸಭಾ(Rajyasabha) ರಣರಂಗದಲ್ಲಿ ಶುರುವಾಗಿರೋ “ಪಂಚ”ಮಂತ್ರ, “ಪಂಚರ್” ತಂತ್ರದ ರೋಚಕ ಸ್ಟೋರಿ. ಫೆಬ್ರವರಿ 27ರಂದು ನಡೆಯಲಿರೋ ರಾಜ್ಯಸಭಾ ಚುನಾವಣೆ, ರಾಜ್ಯದಲ್ಲಿ ರೋಚಕ ತಿರುವು ಪಡೆದುಕೊಂಡಿದೆ. ಕಾರಣ, ಬಿಜೆಪಿ(BJP)-ಜೆಡಿಎಸ್(JDS) ದೋಸ್ತಿ ಪಾಳೆಯದಿಂದ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸದ್ಯದ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ ಒಂದು ಸ್ಥಾನ ಅನ್ನೋದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಕಾಂಗ್ರೆಸ್'ನಿಂದ ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ ಇಡೀ ರಾಜ್ಯಸಭೆ ಅಖಾಡವನ್ನು ರಣರಂಗವಾಗಿಸಿರೋದು ದೋಸ್ತಿ ಪಾಳೆಯದಿಂದ ಸಿಡಿದಿರೋ ಪಂಚಂತ್ರ. ಯೆಸ್.. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಬಿಜೆಪಿ-ಜೆಡಿಎಸ್'ನ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ವೀಕ್ಷಿಸಿ:  ಸಿಎಂ ಸುದೀರ್ಘ ಬಜೆಟ್‌ ಮಂಡನೆ: ಲೋಕಸಭಾ ಚುನಾವಣಾ ಮತಬೇಟೆಗೆ ಪೂರಕವಾಗಿ ಅನುದಾನ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more