Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Published : Feb 16, 2024, 03:16 PM IST

ರಾಜ್ಯಸಭೆ ರಣರಂಗಕ್ಕೆ ರೋಚಕ ತಿರುವು ಕೊಟ್ಟ ದೋಸ್ತಿಗಳ "ಪಂಚ"ತಂತ್ರ..!
ಕಾಂಗ್ರೆಸ್ ಮತಗಳಿಗೆ ಕನ್ನ.. ಕೈಗೆ ದೋಸ್ತಿ ಗುನ್ನ.. ನಡೆಯುತ್ತಾ ಪವಾಡ..?
"ಕಾಂಗ್ರೆಸ್‌ನಲ್ಲಿ ನನಗೆ ಗೆಳೆಯರಿದ್ದಾರೆ.." ಏನಿದು ರೆಡ್ಡಿ ಮಾತಿನ ಮರ್ಮ..?    

ಕಮಲದಳ ನಾಯಕರು ಆಡ್ತಿರೋ ಗೂಢಾರ್ಥದ ಮಾತುಗಳನ್ನು ಕೇಳಿಸ್ಕೊಂಡ್ರಾ. ಇದು ರಾಜ್ಯಸಭಾ(Rajyasabha) ರಣರಂಗದಲ್ಲಿ ಶುರುವಾಗಿರೋ “ಪಂಚ”ಮಂತ್ರ, “ಪಂಚರ್” ತಂತ್ರದ ರೋಚಕ ಸ್ಟೋರಿ. ಫೆಬ್ರವರಿ 27ರಂದು ನಡೆಯಲಿರೋ ರಾಜ್ಯಸಭಾ ಚುನಾವಣೆ, ರಾಜ್ಯದಲ್ಲಿ ರೋಚಕ ತಿರುವು ಪಡೆದುಕೊಂಡಿದೆ. ಕಾರಣ, ಬಿಜೆಪಿ(BJP)-ಜೆಡಿಎಸ್(JDS) ದೋಸ್ತಿ ಪಾಳೆಯದಿಂದ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸದ್ಯದ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ ಒಂದು ಸ್ಥಾನ ಅನ್ನೋದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಕಾಂಗ್ರೆಸ್'ನಿಂದ ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ ಇಡೀ ರಾಜ್ಯಸಭೆ ಅಖಾಡವನ್ನು ರಣರಂಗವಾಗಿಸಿರೋದು ದೋಸ್ತಿ ಪಾಳೆಯದಿಂದ ಸಿಡಿದಿರೋ ಪಂಚಂತ್ರ. ಯೆಸ್.. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಬಿಜೆಪಿ-ಜೆಡಿಎಸ್'ನ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ವೀಕ್ಷಿಸಿ:  ಸಿಎಂ ಸುದೀರ್ಘ ಬಜೆಟ್‌ ಮಂಡನೆ: ಲೋಕಸಭಾ ಚುನಾವಣಾ ಮತಬೇಟೆಗೆ ಪೂರಕವಾಗಿ ಅನುದಾನ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more