Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Rajya Sabha Election: ನಡೆಯಲಿದ್ಯಾ ಅಡ್ಡ ಮತದಾನ..? ಏನಿದು ಮತ ಸಮೀಕರಣ..?

Published : Feb 16, 2024, 03:16 PM IST

ರಾಜ್ಯಸಭೆ ರಣರಂಗಕ್ಕೆ ರೋಚಕ ತಿರುವು ಕೊಟ್ಟ ದೋಸ್ತಿಗಳ "ಪಂಚ"ತಂತ್ರ..!
ಕಾಂಗ್ರೆಸ್ ಮತಗಳಿಗೆ ಕನ್ನ.. ಕೈಗೆ ದೋಸ್ತಿ ಗುನ್ನ.. ನಡೆಯುತ್ತಾ ಪವಾಡ..?
"ಕಾಂಗ್ರೆಸ್‌ನಲ್ಲಿ ನನಗೆ ಗೆಳೆಯರಿದ್ದಾರೆ.." ಏನಿದು ರೆಡ್ಡಿ ಮಾತಿನ ಮರ್ಮ..?    

ಕಮಲದಳ ನಾಯಕರು ಆಡ್ತಿರೋ ಗೂಢಾರ್ಥದ ಮಾತುಗಳನ್ನು ಕೇಳಿಸ್ಕೊಂಡ್ರಾ. ಇದು ರಾಜ್ಯಸಭಾ(Rajyasabha) ರಣರಂಗದಲ್ಲಿ ಶುರುವಾಗಿರೋ “ಪಂಚ”ಮಂತ್ರ, “ಪಂಚರ್” ತಂತ್ರದ ರೋಚಕ ಸ್ಟೋರಿ. ಫೆಬ್ರವರಿ 27ರಂದು ನಡೆಯಲಿರೋ ರಾಜ್ಯಸಭಾ ಚುನಾವಣೆ, ರಾಜ್ಯದಲ್ಲಿ ರೋಚಕ ತಿರುವು ಪಡೆದುಕೊಂಡಿದೆ. ಕಾರಣ, ಬಿಜೆಪಿ(BJP)-ಜೆಡಿಎಸ್(JDS) ದೋಸ್ತಿ ಪಾಳೆಯದಿಂದ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸದ್ಯದ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ ಒಂದು ಸ್ಥಾನ ಅನ್ನೋದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಕಾಂಗ್ರೆಸ್'ನಿಂದ ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ನಾಮಪತ್ರ ಸಲ್ಲಿಸಿದ್ದಾರೆ. ಆದ್ರೆ ಇಡೀ ರಾಜ್ಯಸಭೆ ಅಖಾಡವನ್ನು ರಣರಂಗವಾಗಿಸಿರೋದು ದೋಸ್ತಿ ಪಾಳೆಯದಿಂದ ಸಿಡಿದಿರೋ ಪಂಚಂತ್ರ. ಯೆಸ್.. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಬಿಜೆಪಿ-ಜೆಡಿಎಸ್'ನ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ವೀಕ್ಷಿಸಿ:  ಸಿಎಂ ಸುದೀರ್ಘ ಬಜೆಟ್‌ ಮಂಡನೆ: ಲೋಕಸಭಾ ಚುನಾವಣಾ ಮತಬೇಟೆಗೆ ಪೂರಕವಾಗಿ ಅನುದಾನ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more