ಲಕ್ಷ್ಮೀ ಪಂಥಾಹ್ವಾನ, ಕೆಸರಿನ ಕಥೆ ಹೇಳಿದ ಕೇಸರಿಕಲಿ! ಸಿ.ಟಿ ರವಿಗೆ ಸಚಿವೆ ಆತ್ಮಸಾಕ್ಷಿಯ ಸವಾಲ್!

ಲಕ್ಷ್ಮೀ ಪಂಥಾಹ್ವಾನ, ಕೆಸರಿನ ಕಥೆ ಹೇಳಿದ ಕೇಸರಿಕಲಿ! ಸಿ.ಟಿ ರವಿಗೆ ಸಚಿವೆ ಆತ್ಮಸಾಕ್ಷಿಯ ಸವಾಲ್!

Published : Dec 25, 2024, 01:07 PM IST

ಸಿ.ಟಿ. ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಗ್ಯುದ್ಧ ತೀವ್ರಗೊಂಡಿದ್ದು, ಹೆಬ್ಬಾಳ್ಕರ್ ಅವರು ರವಿಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಸವಾಲು ಹಾಕಿದ್ದಾರೆ. ರವಿ ಆಕ್ಷೇಪಾರ್ಹ ಪದ ಬಳಸಿಲ್ಲ ಎಂದಾದರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.

ಹದ್ದು ಮೀರಿದ ಮಾತು, ಹಳಿ ತಪ್ಪಿದ ಮಾತಿಗೆ ಹೊತ್ತಿಕೊಂಡದ್ದು ಕಿಚ್ಚು ರೊಚ್ಚಿನ ಜ್ವಾಲಾಮುಖಿ.  ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಣೆ ಪ್ರಮಾಣದ ಸವಾಲ್..! ಸಿ.ಟಿ ರವಿ Vs ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವೀಗ ಸಿಐಡಿ ಮೆಟ್ಟಿಲೇರಿದೆ.. ಇದು ಕಾನೂನು ಬಾಹಿರ ಅಂತ ಬಿಜೆಪಿ ಆರೋಪಿಸಿದ್ದೇಕೆ..? ಬಿಜೆಪಿ ಆರೋಪಕ್ಕೆ ಹೋಮ್ ಮಿನಿಸ್ಟರ್ ಕೊಟ್ಟ ಉತ್ತರವೇನು..? ವಿಧಾನ ಪರಿಷತ್ ಸದನದೊಳಗೆ ನಡೆದ ಘಟನೆ ಪೊಲೀಸ್ ತನಿಖೆಯ ವ್ಯಾಪ್ತಿಗೆ ಬರುತ್ತಾ..?  

ಆಕ್ಷೇಪಾರ್ಹ ಪದ ಬಳಸಿಲ್ಲ ಅಂದ್ರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ. ನಾನೂ ಕುಟುಂಬ ಸಮೇತ ಬರುವೆ. ನೀವೂ ಬನ್ನಿ ಆಣೆ ಪ್ರಮಾಣ ಮಾಡೋಣ ಎಂದು ಸಿ.ಟಿ. ರವಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇರವಾಗಿ ಸವಾಲು ಹಾಕಿದ್ದಾರೆ

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರಿಗೂ ಸವಾಲು ಹಾಕಲ್ಲ, ಜವಾಬ್ ಕೇಳುತ್ತಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಸ್ಟಂಟ್ ಬೇಕಿಲ್ಲ. ಮಾಡಬಾರದ್ದನ್ನು ಮಾಡಿ ಬಿಜೆಪಿ ನಾಯಕರೇ ವಿಜೃಂಭಿಸುತ್ತಿದ್ದಾರೆ. ಆಡಬಾರದ್ದನ್ನು ಆಡಿರುವ ಸಿ.ಟಿ. ರವಿಗೆ ಹೂವು, ಹಾರ, ತೂರಾಯಿ ಹಾಕಿಸಿಕೊಳ್ತಿದ್ದಾರೆ, ಪಟಾಕಿ ಹೊಡಿಸಿಕೊಳ್ತಿದ್ದಾರೆ. ಅದಕ್ಕಾಗಿ ನಾನು ಇಷ್ಟೆ ಹೇಳೋದು ಎಂದರು.

ಧರ್ಮಸ್ಥಳ ಕ್ಷೇತ್ರದ ಮಂಜುನಾಥನನ್ನು ನಾನು ನಂಬುತ್ತೇನೆ. ದೇವಾನು ದೇವತೆಗಳನ್ನು ನಾನು ನಂಬುತ್ತೇನೆ. ಸಿ‌.ಟಿ. ರವಿ ಅವರ ಚಿಕ್ಕಮಗಳೂರಿಗೆ ಧರ್ಮಸ್ಥಳ ತುಂಬ ಹತ್ತಿರಯಿದೆ. ನೀವೂ ದೇವರನ್ನು ನಂಬುತ್ತೀರಿ. ದತ್ತಮಾಲೆ ಹಾಕುತ್ತೀರಿ. ದತ್ತ ಪೀಠಕ್ಕೆ ಹೋಗುತ್ತೀರಿ. ಆ ಪದ ಬಳಸಿಲ್ಲ ಎಂದರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬನ್ನಿ, ನಾನೂ ಬರುತ್ತೇನೆ ಎಂದು ಹೆಬ್ಬಾಳಕರ ಸವಾಲು ಹಾಕಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more