ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

Published : Dec 03, 2024, 03:57 PM IST

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. 

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. ಗುರು-ಬಸವ ಮಂಟಪ ಸಂಚಾಲಕ ಶಶಿಧರ ಕರವೀರ ಶೆಟ್ಟರ್ ಮಾತನಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ವಿಶ್ವದಲ್ಲೇ ಮೊದಲು ಸಂಸತ್ತನ್ನ ಕೊಟ್ಟಿದ್ದು ಬಸವಣ್ಣ, ಮನುವಾದವನ್ನು ಧಿಕ್ಕರಿಸಿ ಸಮಾನತೆ ಆಧಾರದ ಮೇಲೆ ಸಮಾಜ ಕೊಟ್ಟರು. ಯತ್ನಾಳ್ 'ಬಸವಣ್ಣನವರು ಕೈಲಾಗದವರು' ಅಂತ ಯಾವ ಆಧಾರದ ಮೇಲೆ ಹೇಳಿದ್ರು. ಲಿಂಗಾಯತ ನಾಯಕರಾಗಿ ಲಿಂಗಾಯತರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಅವರ ಹೇಳಿಕೆ ಅವರ ಮನೆಯ ಸಂಸ್ಕಾರ ತಿಳಿಸಿ ಕೊಡುತ್ತದೆ. ನಮ್ಮಲ್ಲಿ ಅದ್ಭುತ ವಚನ ಸಾಹಿತ್ಯ ಇದೆ, ಇವರ ಹೇಳಿಕೆಗೆ ಯಾವ ಆಧಾರ ಇದೆ..? ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತಂದಂತಹ ಯತ್ನಾಳ್ ಕ್ಷಮೆ ಯಾಚಿಸಬೇಕು. ಈ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳಬೇಕು. ಯತ್ನಾಳರ ಭಂಡತನದ ಮಾತನ್ನು ನಾವು ಒಪ್ಪುವುದಿಲ್ಲ. ಹೀಗಾಗಿ ಸರ್ಕಾರಕ್ಕೆ ಹಾಗೂ ಅವರ ಪಕ್ಷಕ್ಕೆ ಮನವಿ ಮಾಡುತ್ತೇವೆ. ಕೂಡಲೇ ಯತ್ನಾಳ್ ಅವರು ನಾಡಿನ‌ ಜನರ ಕ್ಷಮೆಯಾಚಿಸಬೇಕು. ಯತ್ನಾಳ್ ಅವರು ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯತ್ನಾಳರನ್ನ ಶಾಸಕ ಸ್ಥಾನದಿಂದ ಅನರ್ಹ ಮಾಡಿ, ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಅಂದಾಗ ಮಾತ್ರ ಬಸವತತ್ವಕ್ಕೆ ಗೌರವ ಕೊಟ್ಟಂತೆ. ಒಂದು ವೇಳೆ ಯತ್ನಾಳ್ ಕ್ಷಮೆಯಾಚಿಸದಿದ್ದರೆ ಅವರನ್ನು ನಾವು ಲಿಂಗಾಯತ ನಾಯಕನನ್ನಾಗಿ ಒಪ್ಪುವುದಿಲ್ಲ. ಮುಂದಿನ‌ ದಿನಗಳಲ್ಲಿ ಯತ್ನಾಳ್ ಅವರನ್ನ‌ ಮನೆಗೆ ಕಳಿಸುವುದು ನಿಶ್ಚಿತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more