ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

Published : Dec 03, 2024, 03:57 PM IST

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. 

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. ಗುರು-ಬಸವ ಮಂಟಪ ಸಂಚಾಲಕ ಶಶಿಧರ ಕರವೀರ ಶೆಟ್ಟರ್ ಮಾತನಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ವಿಶ್ವದಲ್ಲೇ ಮೊದಲು ಸಂಸತ್ತನ್ನ ಕೊಟ್ಟಿದ್ದು ಬಸವಣ್ಣ, ಮನುವಾದವನ್ನು ಧಿಕ್ಕರಿಸಿ ಸಮಾನತೆ ಆಧಾರದ ಮೇಲೆ ಸಮಾಜ ಕೊಟ್ಟರು. ಯತ್ನಾಳ್ 'ಬಸವಣ್ಣನವರು ಕೈಲಾಗದವರು' ಅಂತ ಯಾವ ಆಧಾರದ ಮೇಲೆ ಹೇಳಿದ್ರು. ಲಿಂಗಾಯತ ನಾಯಕರಾಗಿ ಲಿಂಗಾಯತರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಅವರ ಹೇಳಿಕೆ ಅವರ ಮನೆಯ ಸಂಸ್ಕಾರ ತಿಳಿಸಿ ಕೊಡುತ್ತದೆ. ನಮ್ಮಲ್ಲಿ ಅದ್ಭುತ ವಚನ ಸಾಹಿತ್ಯ ಇದೆ, ಇವರ ಹೇಳಿಕೆಗೆ ಯಾವ ಆಧಾರ ಇದೆ..? ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತಂದಂತಹ ಯತ್ನಾಳ್ ಕ್ಷಮೆ ಯಾಚಿಸಬೇಕು. ಈ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳಬೇಕು. ಯತ್ನಾಳರ ಭಂಡತನದ ಮಾತನ್ನು ನಾವು ಒಪ್ಪುವುದಿಲ್ಲ. ಹೀಗಾಗಿ ಸರ್ಕಾರಕ್ಕೆ ಹಾಗೂ ಅವರ ಪಕ್ಷಕ್ಕೆ ಮನವಿ ಮಾಡುತ್ತೇವೆ. ಕೂಡಲೇ ಯತ್ನಾಳ್ ಅವರು ನಾಡಿನ‌ ಜನರ ಕ್ಷಮೆಯಾಚಿಸಬೇಕು. ಯತ್ನಾಳ್ ಅವರು ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯತ್ನಾಳರನ್ನ ಶಾಸಕ ಸ್ಥಾನದಿಂದ ಅನರ್ಹ ಮಾಡಿ, ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಅಂದಾಗ ಮಾತ್ರ ಬಸವತತ್ವಕ್ಕೆ ಗೌರವ ಕೊಟ್ಟಂತೆ. ಒಂದು ವೇಳೆ ಯತ್ನಾಳ್ ಕ್ಷಮೆಯಾಚಿಸದಿದ್ದರೆ ಅವರನ್ನು ನಾವು ಲಿಂಗಾಯತ ನಾಯಕನನ್ನಾಗಿ ಒಪ್ಪುವುದಿಲ್ಲ. ಮುಂದಿನ‌ ದಿನಗಳಲ್ಲಿ ಯತ್ನಾಳ್ ಅವರನ್ನ‌ ಮನೆಗೆ ಕಳಿಸುವುದು ನಿಶ್ಚಿತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more