ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

ಯತ್ನಾಳ್ ವಿರುದ್ಧ ಭುಗಿಲೆದ್ದ ಲಿಂಗಾಯತರ ಆಕ್ರೋಶ: ಉಚ್ಚಾಟನೆಗೆ ಆಗ್ರಹ

Published : Dec 03, 2024, 03:57 PM IST

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. 

ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆಗೆ ಲಿಂಗಾಯತ ಸಮಾಜ ಆಗ್ರಹಿಸಿದೆ. ಹುಬ್ಬಳ್ಳಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂಡ ಒಟ್ಟು ಸೇರಿದ ಲಿಂಗಾಯತ ಸಂಘಟನೆಗಳು ಯತ್ನಾಳ್ ಹೇಳಿಕೆ ವಿರುದ್ಧ ಕಿಡಿಕಾರಿವೆ. ಗುರು-ಬಸವ ಮಂಟಪ ಸಂಚಾಲಕ ಶಶಿಧರ ಕರವೀರ ಶೆಟ್ಟರ್ ಮಾತನಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ವಿಶ್ವದಲ್ಲೇ ಮೊದಲು ಸಂಸತ್ತನ್ನ ಕೊಟ್ಟಿದ್ದು ಬಸವಣ್ಣ, ಮನುವಾದವನ್ನು ಧಿಕ್ಕರಿಸಿ ಸಮಾನತೆ ಆಧಾರದ ಮೇಲೆ ಸಮಾಜ ಕೊಟ್ಟರು. ಯತ್ನಾಳ್ 'ಬಸವಣ್ಣನವರು ಕೈಲಾಗದವರು' ಅಂತ ಯಾವ ಆಧಾರದ ಮೇಲೆ ಹೇಳಿದ್ರು. ಲಿಂಗಾಯತ ನಾಯಕರಾಗಿ ಲಿಂಗಾಯತರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಅವರ ಹೇಳಿಕೆ ಅವರ ಮನೆಯ ಸಂಸ್ಕಾರ ತಿಳಿಸಿ ಕೊಡುತ್ತದೆ. ನಮ್ಮಲ್ಲಿ ಅದ್ಭುತ ವಚನ ಸಾಹಿತ್ಯ ಇದೆ, ಇವರ ಹೇಳಿಕೆಗೆ ಯಾವ ಆಧಾರ ಇದೆ..? ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತಂದಂತಹ ಯತ್ನಾಳ್ ಕ್ಷಮೆ ಯಾಚಿಸಬೇಕು. ಈ ಹೇಳಿಕೆಯನ್ನು ಹಿಂದೆ ತೆಗೆದುಕೊಳ್ಳಬೇಕು. ಯತ್ನಾಳರ ಭಂಡತನದ ಮಾತನ್ನು ನಾವು ಒಪ್ಪುವುದಿಲ್ಲ. ಹೀಗಾಗಿ ಸರ್ಕಾರಕ್ಕೆ ಹಾಗೂ ಅವರ ಪಕ್ಷಕ್ಕೆ ಮನವಿ ಮಾಡುತ್ತೇವೆ. ಕೂಡಲೇ ಯತ್ನಾಳ್ ಅವರು ನಾಡಿನ‌ ಜನರ ಕ್ಷಮೆಯಾಚಿಸಬೇಕು. ಯತ್ನಾಳ್ ಅವರು ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯತ್ನಾಳರನ್ನ ಶಾಸಕ ಸ್ಥಾನದಿಂದ ಅನರ್ಹ ಮಾಡಿ, ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಅಂದಾಗ ಮಾತ್ರ ಬಸವತತ್ವಕ್ಕೆ ಗೌರವ ಕೊಟ್ಟಂತೆ. ಒಂದು ವೇಳೆ ಯತ್ನಾಳ್ ಕ್ಷಮೆಯಾಚಿಸದಿದ್ದರೆ ಅವರನ್ನು ನಾವು ಲಿಂಗಾಯತ ನಾಯಕನನ್ನಾಗಿ ಒಪ್ಪುವುದಿಲ್ಲ. ಮುಂದಿನ‌ ದಿನಗಳಲ್ಲಿ ಯತ್ನಾಳ್ ಅವರನ್ನ‌ ಮನೆಗೆ ಕಳಿಸುವುದು ನಿಶ್ಚಿತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more