ಸಿಂದಗಿ ಬೈ ಎಲೆಕ್ಷನ್: ಘಟಾನುಘಟಿ ನಾಯಕರಿಗೆ ಗಾಳ ಹಾಕಿದ ಬಿಜೆಪಿ

Oct 2, 2021, 4:30 PM IST

ವಿಜಯಪುರ, (ಅ.02): ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಸಿಂದಗಿ ಕ್ಷೇತ್ರ ಗೆಲ್ಲಲು ಬಿಜೆಪಿ ಘಟಾನುಘಟಿ ನಾಯಕರಿಗೆ ಗಾಳ ಹಾಕಿದೆ. 

ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯನ್ನು ನೇಮಿಸಿದ ಬಿಜೆಪಿ

ಹೌದು...ವಿಜಯಪುರ ಜಿಲ್ಲೆಯ ಕಾಂಗ್ರೆಸ್, ಜೆಡಿಎಸ್ ಮುಖಂಡರ ದಂಡು ಬಿಜೆಪಿಯತ್ತ ಮುಖ ಮಾಡಿರುವುದು ಜಿಲ್ಲೆಯಲ್ಲಿ ರಾಜಕೀಯ ಮತ್ತಷ್ಟು ರಂಗೇರಿದೆ. ಅ.5 ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದಕ್ಕಾಗಿ ವಿಜಯಪುರ ನಗರದ ಕಿತ್ತೂರಿರಾಣಿ ಚೆನ್ನಮ್ಮ ಸಭಾ ಭವನದಲ್ಲಿ ಸಿದ್ಧತೆ ಮಾಡಲಾಗುತ್ತಿದೆ.