ಲೋಕಸಭೆ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆಗೆ ತಾತ್ಕಾಲಿಕ ಬ್ರೇಕ್..?

Jul 28, 2023, 9:23 PM IST

ಬೆಂಗಳೂರು (ಜು.28): ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿಚಾರ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ವಿಧಾನಸಭೆ ಅಧಿವೇಶನದಲ್ಲೂ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೈತ್ರಿ ಪಕ್ಕಾ ಎನ್ನಲಾಗಿತ್ತು. ಆದರೆ ಇದೀಗ ಬಿಜೆಪಿ - ಜೆಡಿಎಸ್ ಮೈತ್ರಿ ಮಾತುಕತೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.