Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Published : Mar 07, 2023, 07:22 PM IST

ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಕಿಡಿಕಾರಿದ್ದಾರೆ.

ಬೆಂಗಳೂರು (ಮಾ.07): ಸುಮಾರು 6 ಕೋಟಿ ರೂ. ಅಕ್ರಮ ಹಣದ ಆರೋಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರು ಜಾಮೀನು ಪಡೆದುಕೊಂಡು ಅದ್ಧೂರಿ ಮೆರವಣಿಗೆ ಮಾಡಿಸಿಕೊಂಡಿದ್ದಾನೆ. ಈ ಕುರಿತು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಮಾತನಾಡಿ, ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕಿಡಿಕಾರಿದ್ದಾರೆ. ಲೋಕಾಯುಕ್ತಕ್ಕೆ ದೂರು ಕೊಡುವವರು ವೀಡಿಯೋ ಮತ್ತು ಆಡಿಯೋ ಸಾಕ್ಷಾಧಾರಗಳ ಮೂಲಕ ದೂರು ನೀಡಲು ಹೋಗುತ್ತಾರೆ. ಆಗ ಸಂಪೂರ್ಣವಾಗಿ ಎಫ್‌ಐಆರ್‌ ದಾಖಲಿಸಿಕೊಳ್ಳುತ್ತಾರೆ. ಇಲ್ಲವೆಂದರೆ ಯಾವುದಾದರೂ ನ್ಯೂಸ್‌ ಚಾನೆಲ್‌ಗೆ ಅದನ್ನು ಕೊಟ್ಟಾಗ ಲೋಕಾಯುಕ್ತದ ಮೇಲೆ ದೊಡ್ಡ ಆರೋಪ ಕೇಳಿಬರುತ್ತದೆ.

ಲೋಕಾಯುಕ್ತರು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರನ ಕಚೇರಿ ಮೇಲೆ ದಾಳಿ, ಅವರ ಮನೆಯ ಮೇಲೆ ದಾಳಿ ಹಾಗೂ ಇತರೆಡೆ ದಾಳಿ ಸುಮಾರು 6 ಕೋಟಿ ರೂ. ಅಕ್ರಮ ಹಣ ಇಟ್ಟುಕೊಂಡಿರುವುದು ಕಂಡುಬಂದಿತ್ತು. ಆದರೆ, ನ್ಯಾಯಾಲಯದಲ್ಲಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪರವಾಗಿ ಹಿರಿಯ ವಕೀಲ ವಾದವನ್ನು ಮಾಡಿದ್ದಾರೆ. ಮತ್ತೊಂದೆಡೆ ಲೋಕಾಯುಕ್ತ ಇಲಾಖೆ ಪರವಾಗಿ ಕಿರಿಯ ಸರ್ಕಾರಿ ವಕೀಲ ವಾದ ಮಾಡಿದ್ದಾರೆ ಎಂದು ಕೇಳಿಬಂದಿದೆ. ಪರಮ ಪವಿತ್ರವಾದ ರಾಜಕಾರಣಕ್ಕೆ ಹಲ್ಕಾಗಳು ಬಂದಿದ್ದಾರೆ. ಇದನ್ನು ಕ್ಲಿಯರ್‌ ಮಾಡುವುದು ಅಗತ್ಯವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more