ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

Published : Oct 10, 2023, 10:43 AM IST

ಲೋಕಸಭೆ ಎಲೆಕ್ಷನ್‌ ಘೋಷಣೆಗೂ ಮುನ್ನವೇ ದಾವಣಗೆರೆಯಲ್ಲಿ ಕಾವು ಹೆಚ್ಚಾಗಿದೆ. ಒಂದೇ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಸಚಿವರು,ಶಾಸಕರ ಮಧ್ಯೆ ಟಾಕ್‌ವಾರ್ ಜೋರಾಗಿದೆ. ನನಗೆ ಟಿಕೆಟ್ ಸಿಗುತ್ತೆ ಅಂತಾ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಓಡಾಟನೂ ಶುರುಮಾಡಿದ್ದಾರೆ. ಆದ್ರೆ ಚನ್ನಗಿರಿ ಶಾಸಕ ಹೇಳಿದ ಒಂದು ಮಾತು ಸಚಿವ ಶಾಮನೂರು ಫ್ಯಾಮಿಲಿಗೆ ಆಕ್ರೋಶ ತಂತಿದೆ.

ದಾವಣಗೆರೆ ಲೋಕಸಭೆ ಎಲೆಕ್ಷನ್ ಕಾವು ದಿನದಿನಕ್ಕೂ ಜೋರಾಗ್ತಿದೆ. ಒಂದೇ ಟಿಕೆಟ್‌ಗೆ ಒಂದೇ ಪಕ್ಷದ ಇಬ್ಬರ ಮಧ್ಯೆ ಮಾತಿನ ಕಾಳಗ ಜೋರಾಗಿದೆ. ಕಾಂಗ್ರೆಸ್‌ನಿಂದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸ್ತಾರೆ ಎಂಬ ಚರ್ಚೆ ಶುರುವಾಗಿದೆ. ಅವರು ಕೂಡ ಕ್ಷೇತ್ರದಲ್ಲಿ ಬಿರುಸಿನ ಓಡಾಟ ಶುರುಮಾಡಿದ್ದು ನಾನೇ ಅಭ್ಯರ್ಥಿ ಆಗ್ತೀನಿ ಅನ್ನೋ ಮಾತುಗಳನ್ನಾಡಿದ್ರು..ಆದ್ರೆ ಈಗ ಚನ್ನಗಿರಿ ಶಾಸಕ ಶಿವಗಾಂಗ ಬಸವರಾಜ್ ಹೇಳಿದ ಮಾತು ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಎಸ್‌.ಎಸ್‌ ಮಲ್ಲಿಕಾರ್ಜುನ್ (S.S. Mallikarjun) ಪತ್ನಿ ಸ್ಪರ್ಧಿಸೋದು ಅನುಮಾನ ಎಂದ ಶಾಸಕ ಶಿವಗಂಗಾ ಬಸವರಾಜ್ ದಾವಣಗೆರೆಯಲ್ಲಿ(Davanagere) ಹೊಸಬರಿಗೆ ಟಿಕೆಟ್ ಕೊಟ್ರೆ ಒಳ್ಳೇಯದು ಅಂದ್ರು..ಅಲ್ದೆ ಇನ್‌ಸೈಟ್ ಆಕಾಡೆಮಿ ವಿನಯ್ ಕುಮಾರ್ ಸ್ಪರ್ಧಿಸಿದ್ರೆ ನನ್ನ ಬೆಂಬಲ ಇದೆ ಅಂತಾ ಹೇಳಿದ್ರು..ಈ ಮಾತಿಗೆ ಕೆರಳಿದ ಸಚಿವ ಮಲ್ಲಿಕಾರ್ಜುನ್ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಗೆ ಮಣೆ ಹಾಕುತ್ತೆ ಅಂದ್ರು.ಅಷ್ಟೇ ಅಲ್ಲ ಕಾಳಪ್ಪ ಯಾರು ಬೋಳಪ್ಪ ಯಾರು ಅಂತ ಗುರುತಿಸಬೇಕು. ಎಲ್ಲಿಂದಲೋ ಬಂದು ಯಾರಿಗೋ ಟಿಕೆಟ್(Ticket) ಕೊಟ್ರೆ ಆಗೋಲ್ಲ ಅಂತಾ ಪರೋಕ್ಷವಾಗಿ ಶಾಸಕರ ಮಾತಿಗೆ ಸಚಿವರು ಆಕ್ರೋಶ ಹೊರಹಾಕಿದ್ರು. ಬಿಜೆಪಿಯಲ್ಲಿ(BJP) ನಾನು ಟಿಕೆಟ್ ಆಕಾಂಕ್ಷಿ ಎಂದು ರೇಣುಕಾಚಾರ್ಯ ಓಡಾಡ್ತಿದ್ದಾರೆ. ಇತ್ತ ಕಾಂಗ್ರೆಸ್ನಲ್ಲಿ ಶಾಮನೂರು ಸೊಸೆ ನನಗೆ ಟಿಕೆಟ್ ಸಿಗುತ್ತೆ ಅಂತಾ ಕ್ಷೇತ್ರದಲ್ಲಿ ಎಲೆಕ್ಷನ್ ಘೋಷಣೆಗೂ ಮುನ್ನವೇ ಕ್ಯಾಂಪೇನ್ ಶುರುಮಾಡಿದ್ದಾರೆ. ಕಾಂಗ್ರೆಸ್  ಟಿಕೆಟ್ ವಿಚಾರದಲ್ಲಿ ಶಾಸಕರು-ಸಚಿವರ ಮಧ್ಯೆ ಟಾಕ್ವಾರ್ ಬೇರೆ ಶುರುವಾಗಿದ್ದು, ದಾವಣೆಗೆರೆ ಲೋಕಸಭೆ ರಣಕಣ ಕಿಕ್ಕೇರಿಸಿದೆ.

ಇದನ್ನೂ ವೀಕ್ಷಿಸಿ:  ಹಮಾಸ್ ಉಗ್ರರ ದಾಳಿಗೆ ರಕ್ತಸಿಕ್ತವಾಯ್ತು ಇಸ್ರೇಲ್: 2005ರಿಂದಲೂ ಧಗಧಗಿಸುತ್ತಲೇ ಇದೆ ದ್ವೇಷದ ಜ್ವಾಲೆ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more