ಮಂಡ್ಯದಲ್ಲಿ ಗರಿಗೆದರಿದ ರಾಜಕೀಯ: ಜೆಡಿಎಸ್ ಮಣಿಸಲು ಬಿಜೆಪಿ ಬಿಗ್ ಪ್ಲ್ಯಾನ್!

Mar 1, 2019, 5:13 PM IST

ಮಂಡ್ಯ[ಮಾ.01]: ಲೋಕಸಭಾ ಚುನಾವಣೆಗೂ ಮೊದಲು ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಆರ್ಭಟಕ್ಕೆ ಬ್ರೇಕ್ ಹಾಕಲು ಬಿಜಜೆಪಿ ಬಹುದೊಡ್ಡ ಪ್ಲ್ಯಾನ್ ಹಾಕಿದೆ. ಸುಮಲತಾ ಅಂಬರೀಷ್ ಇಲ್ಲಿ ಎಂಟ್ರಿ ಕೊಟ್ಟ ಬಳಿಕ ಈ ಕ್ಷೇತ್ರ ಭಾರೀ ಸಂಚಲನ ಮೂಡಿಸಿದೆ. ಹೀಗಿರುವಾಗ ಕಾಂಗ್ರೆಸ್ ಸುಮಲತಾರಿಗೆ ಟಿಕೆಟ್ ನೀಡಲು ಹಿಂದೇಟು ಹಾಕಿದ್ದು, ಬಿಜೆಪಿ ತನ್ನ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಆದರೆ ಸುಮಲತಾ ಇದಕ್ಕೆತಯಾರಿರಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಅವರು ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ಹೀಗಿರುವಾಗ ಬಿಜೆಪಿಯು ಸುಮಲತಾರಿಗೆ ಬಹಿರಂಗ ಬೆಂಬಲ ನೀಡಲು ಸಿದ್ಧತೆ ನಡೆಸಿದೆ.