ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

Published : Mar 16, 2023, 01:48 PM IST

ಜೆಡಿಎಸ್‌ ಭದ್ರಕೋಟೆ ಮಂಡ್ಯದಲ್ಲಿ ಮೋದಿ ರೋಡ್‌ ಶೋ ಅಬ್ಬರ ಹಾಗೂ ಡಿ.ಕೆ.ಶಿವಕುಮಾರ್‌ ಗುಡುಗಿಗೆ ಠಕ್ಕರ್‌ ಕೊಡಲು ಮುಂದಾಗಿರುವ ರಾಜಕೀಯ ಭೀಷ್ಮ ದೇವೇಗೌಡರು 100 ಕಿ.ಮೀ ಮಹಾಯಾತ್ರೆಯನ್ನು ಆರಂಭಿಸುತ್ತಿದ್ದಾರೆ.


ಬೆಂಗಳೂರು (ಮಾ.16):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ್ದರು. ಇನ್ನು ಡಿಕೆ. ಶಿವಕುಮಾರ್‌ ಅವರೂ ಕೂಡ ಗೌಡರ ವಿರುದ್ಧ ಗುಡುಗಿದ್ದರು. ಆದರೆ, ಇವರಿಬ್ಬರೂ ಠಕ್ಕರ್‌ ಕೊಡುವುದಕ್ಕೆ ಸಿದ್ಧವಾಗಿರುವ ಕರ್ನಾಟಕ ರಾಜಕೀತ ಭೀಷ್ಮ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ತಮ್ಮದರ್ಬಾರ್‌ ಶುರು ಮಾಡಲಿದ್ದಾರೆ. ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಿ.ಮೀ. ಮಹಾಯಾತ್ರೆಯನ್ನ ಮಾಡಲು ಮುಂದಾಗಿದ್ದಾರೆ.

ಒಕ್ಕಲಿಗರ ಒಡ್ಡೋಲಗದಲ್ಲಿ ದೇವೇಗೌಡರ ದಂಡಯಾತ್ರೆ ಈಗ ಆರಂಭವಾಗಲಿದೆ. 90 ವರ್ಷದ ವಯೋವೃದ್ಧ ಗೌಡರಿಂದ 100 ಕಿ.ಮೀ ಮಹಾಯಾತ್ರೆಯೇ ಆರಂಭವಾಗಲಿದೆ. ಒಟ್ಟು 25 ರಣಕ್ಷೇತ್ರಗಳಲ್ಲಿ ಮಹಾಯಾತ್ರೆ ನಡೆಯಲಿದ್ದು, ಮತಬೇಟೆಯನ್ನಾಡಲು ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ. ಈಗ ಆರಂಭವಾಗುತ್ತಿರುವ ದೇವೇಗೌಡರ 100 ಕಿ.ಮೀ ರೋಡ್ ಶೋನ ಹಿಂದೆ ನೂರಾರು ಲೆಕ್ಕಾಚಾರ ಅಡಗಿರುವುದಂತೂ ಸತ್ಯವಾಗಿದೆ. ಇದರಿಂದ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿಯೂ ಕೂಡ ಆತಂಕ ಶುರುವಾಗಲಿದೆ. ಇನ್ನು ಯಾರಿಗೆ ಮತ ಹಾಕಬೇಕು ಎಂದು ಓಲಾಟದಲ್ಲಿರುವ ಮತದಾರರು ದೇವೇಗೌಡ ಆಗಮನದಿಂದ ಜೆಡಿಎಸ್‌ಗೆ ತಮ್ಮ ಮತಗಳನ್ನು ಒತ್ತಲು ದೃಢ ನಿರ್ಧಾರ ಮಾಡುವ ಸಾಧ್ಯತೆಗಳೂ ಹೆಚ್ಚಾಗುತ್ತದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?