ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

Published : Mar 16, 2023, 01:48 PM IST

ಜೆಡಿಎಸ್‌ ಭದ್ರಕೋಟೆ ಮಂಡ್ಯದಲ್ಲಿ ಮೋದಿ ರೋಡ್‌ ಶೋ ಅಬ್ಬರ ಹಾಗೂ ಡಿ.ಕೆ.ಶಿವಕುಮಾರ್‌ ಗುಡುಗಿಗೆ ಠಕ್ಕರ್‌ ಕೊಡಲು ಮುಂದಾಗಿರುವ ರಾಜಕೀಯ ಭೀಷ್ಮ ದೇವೇಗೌಡರು 100 ಕಿ.ಮೀ ಮಹಾಯಾತ್ರೆಯನ್ನು ಆರಂಭಿಸುತ್ತಿದ್ದಾರೆ.


ಬೆಂಗಳೂರು (ಮಾ.16):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ್ದರು. ಇನ್ನು ಡಿಕೆ. ಶಿವಕುಮಾರ್‌ ಅವರೂ ಕೂಡ ಗೌಡರ ವಿರುದ್ಧ ಗುಡುಗಿದ್ದರು. ಆದರೆ, ಇವರಿಬ್ಬರೂ ಠಕ್ಕರ್‌ ಕೊಡುವುದಕ್ಕೆ ಸಿದ್ಧವಾಗಿರುವ ಕರ್ನಾಟಕ ರಾಜಕೀತ ಭೀಷ್ಮ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ತಮ್ಮದರ್ಬಾರ್‌ ಶುರು ಮಾಡಲಿದ್ದಾರೆ. ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಿ.ಮೀ. ಮಹಾಯಾತ್ರೆಯನ್ನ ಮಾಡಲು ಮುಂದಾಗಿದ್ದಾರೆ.

ಒಕ್ಕಲಿಗರ ಒಡ್ಡೋಲಗದಲ್ಲಿ ದೇವೇಗೌಡರ ದಂಡಯಾತ್ರೆ ಈಗ ಆರಂಭವಾಗಲಿದೆ. 90 ವರ್ಷದ ವಯೋವೃದ್ಧ ಗೌಡರಿಂದ 100 ಕಿ.ಮೀ ಮಹಾಯಾತ್ರೆಯೇ ಆರಂಭವಾಗಲಿದೆ. ಒಟ್ಟು 25 ರಣಕ್ಷೇತ್ರಗಳಲ್ಲಿ ಮಹಾಯಾತ್ರೆ ನಡೆಯಲಿದ್ದು, ಮತಬೇಟೆಯನ್ನಾಡಲು ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ. ಈಗ ಆರಂಭವಾಗುತ್ತಿರುವ ದೇವೇಗೌಡರ 100 ಕಿ.ಮೀ ರೋಡ್ ಶೋನ ಹಿಂದೆ ನೂರಾರು ಲೆಕ್ಕಾಚಾರ ಅಡಗಿರುವುದಂತೂ ಸತ್ಯವಾಗಿದೆ. ಇದರಿಂದ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿಯೂ ಕೂಡ ಆತಂಕ ಶುರುವಾಗಲಿದೆ. ಇನ್ನು ಯಾರಿಗೆ ಮತ ಹಾಕಬೇಕು ಎಂದು ಓಲಾಟದಲ್ಲಿರುವ ಮತದಾರರು ದೇವೇಗೌಡ ಆಗಮನದಿಂದ ಜೆಡಿಎಸ್‌ಗೆ ತಮ್ಮ ಮತಗಳನ್ನು ಒತ್ತಲು ದೃಢ ನಿರ್ಧಾರ ಮಾಡುವ ಸಾಧ್ಯತೆಗಳೂ ಹೆಚ್ಚಾಗುತ್ತದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?