ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

ಮೋದಿ ರೋಡ್ ಶೋ‌ಗೆ ಟಕ್ಕರ್ ಕೊಡಲು ದೇವೇಗೌಡರ ಮಹಾಯಾತ್ರೆ! 100 ಕಿ.ಮೀ ಯಾತ್ರೆ ಹಿಂದೆ ನೂರಾರು ಲೆಕ್ಕಾಚಾರ!

Published : Mar 16, 2023, 01:48 PM IST

ಜೆಡಿಎಸ್‌ ಭದ್ರಕೋಟೆ ಮಂಡ್ಯದಲ್ಲಿ ಮೋದಿ ರೋಡ್‌ ಶೋ ಅಬ್ಬರ ಹಾಗೂ ಡಿ.ಕೆ.ಶಿವಕುಮಾರ್‌ ಗುಡುಗಿಗೆ ಠಕ್ಕರ್‌ ಕೊಡಲು ಮುಂದಾಗಿರುವ ರಾಜಕೀಯ ಭೀಷ್ಮ ದೇವೇಗೌಡರು 100 ಕಿ.ಮೀ ಮಹಾಯಾತ್ರೆಯನ್ನು ಆರಂಭಿಸುತ್ತಿದ್ದಾರೆ.


ಬೆಂಗಳೂರು (ಮಾ.16):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ್ದರು. ಇನ್ನು ಡಿಕೆ. ಶಿವಕುಮಾರ್‌ ಅವರೂ ಕೂಡ ಗೌಡರ ವಿರುದ್ಧ ಗುಡುಗಿದ್ದರು. ಆದರೆ, ಇವರಿಬ್ಬರೂ ಠಕ್ಕರ್‌ ಕೊಡುವುದಕ್ಕೆ ಸಿದ್ಧವಾಗಿರುವ ಕರ್ನಾಟಕ ರಾಜಕೀತ ಭೀಷ್ಮ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ತಮ್ಮದರ್ಬಾರ್‌ ಶುರು ಮಾಡಲಿದ್ದಾರೆ. ಹಿನ್ನೆಲೆಯಲ್ಲಿ ರಾಜ್ಯದಲ್ಲಿ 100 ಕಿ.ಮೀ. ಮಹಾಯಾತ್ರೆಯನ್ನ ಮಾಡಲು ಮುಂದಾಗಿದ್ದಾರೆ.

ಒಕ್ಕಲಿಗರ ಒಡ್ಡೋಲಗದಲ್ಲಿ ದೇವೇಗೌಡರ ದಂಡಯಾತ್ರೆ ಈಗ ಆರಂಭವಾಗಲಿದೆ. 90 ವರ್ಷದ ವಯೋವೃದ್ಧ ಗೌಡರಿಂದ 100 ಕಿ.ಮೀ ಮಹಾಯಾತ್ರೆಯೇ ಆರಂಭವಾಗಲಿದೆ. ಒಟ್ಟು 25 ರಣಕ್ಷೇತ್ರಗಳಲ್ಲಿ ಮಹಾಯಾತ್ರೆ ನಡೆಯಲಿದ್ದು, ಮತಬೇಟೆಯನ್ನಾಡಲು ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ. ಈಗ ಆರಂಭವಾಗುತ್ತಿರುವ ದೇವೇಗೌಡರ 100 ಕಿ.ಮೀ ರೋಡ್ ಶೋನ ಹಿಂದೆ ನೂರಾರು ಲೆಕ್ಕಾಚಾರ ಅಡಗಿರುವುದಂತೂ ಸತ್ಯವಾಗಿದೆ. ಇದರಿಂದ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿಯೂ ಕೂಡ ಆತಂಕ ಶುರುವಾಗಲಿದೆ. ಇನ್ನು ಯಾರಿಗೆ ಮತ ಹಾಕಬೇಕು ಎಂದು ಓಲಾಟದಲ್ಲಿರುವ ಮತದಾರರು ದೇವೇಗೌಡ ಆಗಮನದಿಂದ ಜೆಡಿಎಸ್‌ಗೆ ತಮ್ಮ ಮತಗಳನ್ನು ಒತ್ತಲು ದೃಢ ನಿರ್ಧಾರ ಮಾಡುವ ಸಾಧ್ಯತೆಗಳೂ ಹೆಚ್ಚಾಗುತ್ತದೆ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!