ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

Published : Apr 15, 2024, 12:39 PM ISTUpdated : Apr 15, 2024, 12:40 PM IST

ರಂಗೇರುತ್ತಿದೆ ಕಲಬುರಗಿ ಲೋಕಸಭಾ ಚುನಾವಣಾ ಕಣ
ರಾಧಾಕೃಷ್ಣ VS ಉಮೇಶ ಜಾಧವ್ ನಡುವೆ ಬಿಗ್ ಫೈಟ್ 
ಈ ನಡುವೆ ಕ್ಷೇತ್ರದಲ್ಲಿ ನಡೆಯುತ್ತಿದೆ ಪಕ್ಷಾಂತರ ಪರ್ವ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್(Congress) ಸೇರುವ ಸಾಧ್ಯತೆ ಇದ್ದು, ಸಹೋದರ ನಿತಿನ್ ಗುತ್ತೇದಾರ್(Nitin Guttedar) ಬಿಜೆಪಿಗೆ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಅಣ್ಣನ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ನಿತಿನ್ ಸ್ಪರ್ಧಿಸಿದ್ದರು. 50 ಸಾವಿರಲಕ್ಕೂ ಹೆಚ್ಚು ಮತ ಪಡೆದು ನಿತಿನ್ ಗುತ್ತೇದಾರ್ ಗಮನ ಸೆಳೆದಿದ್ದರು. ತನ್ನ ಸೋಲಿಗೆ ಕಾರಣನಾದ ತಮ್ಮ ನಿತಿನ್ ವಿರುದ್ಧ ಅಣ್ಣನ ಸಿಟ್ಟನ್ನು ಹೊರಹಾಕಿದ್ದರು. ನಿತಿನ್ ಬಿಜೆಪಿ ಸೇರ್ಪಡೆಗೆ ಮಾಲೀಕಯ್ಯ ಗುತ್ತೇದಾರ್(Malikayya Guttedar) ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಮಾಲೀಕಯ್ಯ ಗುತ್ತೇದಾರ, ಬಿಜೆಪಿಗೆ(BJP) ಪಾಠ ಕಲಿಸುವ ಉದ್ದೇಶದಿಂದ ಡಿಕೆಶಿ ಭೇಟಿಯಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಸೇರ್ಪಡೆಗೆ ಖರ್ಗೆ ಕುಟುಂಬ ಒಪ್ಪಿಗೆ ನೀಡಿದೆ. ಇನ್ನೊಂದೆಡೆ ಯಡಿಯೂರಪ್ಪ ಕರೆ ಮಾಡಿ  ಮನವೊಲಿಸಲು ಯತ್ನ ಮಾಡಿದ್ದಾರೆ. ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದಿರುವ ಮಾಲೀಕಯ್ಯ ಗುತ್ತೇದಾರ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿರುವ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಸೇರ್ತಾರಾ ಎನ್ನುವುದೇ ಸದ್ಯದ ಸಸ್ಪೆನ್ಸ್ ಆಗಿದೆ.

ಇದನ್ನೂ ವೀಕ್ಷಿಸಿ:  2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more