Suvarna  special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Suvarna special: ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!?

Published : Mar 05, 2023, 03:30 PM IST

ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಬೆಂಗಳೂರು (ಮಾ.05): ಸಂಸದೆ ಸುಮಲತಾ ಅಂಬರೀಶ್ ಅವರ ಒಂದೊಂದು ಹೆಜ್ಜೆಯೂ ನಿಗೂಢವಾಗಿದೆ. ನಾನು ಪಕ್ಷೇತರ ಸಂಸದೆ, ಪಕ್ಷೇತರಳಾಗಿಯೇ ಇರ್ತೇನೆ ಅಂತ ಹೇಳ್ತಾ ಹೇಳ್ತಾ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ತಿದ್ದಾರೆ.

ಹಾಗಾದ್ರೆ ಮಂಡ್ಯ ಸಂಸದೆ ಬಿಜೆಪಿ ಸೇರಿಯೇ ಬಿಡ್ತಾರಾ..? ಈ ಬಗ್ಗೆ ಅವರ ಆಪ್ತ ಮೂಲಗಳು ಹೇಳೇದೇನು..? ಕೇಸರಿ ಪಕ್ಷದ ಕಡೆ ಮಂಡ್ಯ ಗೌಡ್ತಿಯ ನಿಗೂಢ ಹೆಜ್ಜೆ..!? ಬಿಜೆಪಿ ಸಭೆಯಲ್ಲಿ ಲೇಡಿ ರೆಬೆಲ್ ಸ್ಟಾರ್.. ಮಂಡ್ಯ ರಾಜಕಾರಣದಲ್ಲಿ ಸಂಚಲನ..! ಮಂಡ್ಯದ ಮಣ್ಣಿನ ಮಗನನ್ನು ಭೇಟಿ ಮಾಡಿದ್ದೇಕೆ ಸುಮಲತಾ ಅಂಬರೀಶ್..? ಬಿಜೆಪಿ ಸೇರ್ಪಡೆಗೆ ಕೃಷ್ಣ ತಂತ್ರ ಹೆಣೆದರಾ ರೆಬೆಲ್ ಲೇಡಿ..? ಪ್ರಧಾನಿ ಮೋದಿ ಸಮ್ಮುಖದಲ್ಲೇ ಹೊರ ಬೀಳಲಿದ್ಯಾ ಮಹಾ ರಹಸ್ಯ..? ಎಲ್ಲದಕ್ಕೂ ಉತ್ತರ ಇಲ್ಲಿದೆ ನೋಡಿ.

ಸುಮಲತಾ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತರು ಹೇಳಿದ ರಹಸ್ಯ ಇದು. ಹಾಗಾದ್ರೆ ವಿಧಾನಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲ ಯಾರಿಗೆ..? ತೆರೆಮರೆಯಲ್ಲಿ ಬಿಜೆಪಿ ಪರ ಕೆಲಸ ಮಾಡ್ತಾರಾ..? ಎನ್ನುವುದನ್ನು ಕಾದುನೋಡಬೇಕಿದೆ. ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಸುಮಲತಾ ಅಂಬರೀಶ್ ಯಾವ ಪಕ್ಷಕ್ಕೂ ಸೇರೋದಿಲ್ವಂತೆ. ಹಾಗಾದರೆ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆಯ ಬೆಂಬಲ ಯಾವ ಪಕ್ಷಕ್ಕೆ..? ಬಿಜೆಪಿ ಸೇರ್ಪಡೆಯ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಎಚ್ಚರಿಕೆಯ ಹೆಜ್ಜೆ ಇಡ್ತಿದ್ದಾರೆ. ಬಿಜೆಪಿ ಸೇರಿದ್ರೆ ಆಗೋ ಲಾಭ-ನಷ್ಟಗಳ ಲೆಕ್ಕಾಚಾರ ಹಾಕ್ತಿದ್ದಾರೆ. ಆದರೆ ರೆಬೆಲ್ ಲೇಡಿಯ ನಡೆ ಯಾವ ಪಕ್ಷದ ಕಡೆ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕೆಂದರೆ ಇನ್ನೂ ಕೆಲ ತಿಂಗಳು ಕಾಯಲೇಬೇಕು.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more