ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

Published : May 13, 2023, 02:53 PM IST

ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ. ಖಾದರ್​​ ಗೆಲುವು ಸಾಧಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಇದು ಸತ್ಯ ಮತ್ತು ಅಸತ್ಯದ ಚುನಾವಣೆ ಎಂದಿದ್ದಾರೆ.

ದಕ್ಷಿಣ ಕನ್ನಡ: ಸತತವಾಗಿ ಗೆಲುವು ಕಂಡಿರುವ ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಈ ಬಾರಿಯೂ ಬಹುಮತದಿಂದ ಗೆದ್ದಿದ್ದಾರೆ. ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಪ್ರಬಲ ಸ್ಪರ್ಧಿಯಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸಹ ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಗೆಲುವಿನ ಬಗ್ಗೆ ಯು.ಟಿ. ಖಾದರ್‌ ಮಾತನಾಡಿ, ಇದು ಸತ್ಯ ಮತ್ತು ಅಸತ್ಯದ ಚುನಾವಣೆ. ಜ್ಞಾನ ಮತ್ತು ಅಜ್ಞಾನದ ಚುನಾವಣೆಯಲ್ಲಿ ಜನರು ಜ್ಞಾನದ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್‌ನನ್ನು ಗೆಲ್ಲಿಸಿದ್ದಾರೆ. ಯಾರು ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಅವರು ಸೋಲನ್ನು ಅನುಭವಿಸಿದ್ದಾರೆ. ಇಲ್ಲಿ ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಅಗತ್ಯವಾಗಿದೆ. ಮಂಗಳೂರಿನ ಅಭಿವೃದ್ಧಿಗೆ ಏನೇನು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕೋ, ಅದನ್ನು ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more