ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

Published : May 13, 2023, 02:53 PM IST

ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ. ಖಾದರ್​​ ಗೆಲುವು ಸಾಧಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಇದು ಸತ್ಯ ಮತ್ತು ಅಸತ್ಯದ ಚುನಾವಣೆ ಎಂದಿದ್ದಾರೆ.

ದಕ್ಷಿಣ ಕನ್ನಡ: ಸತತವಾಗಿ ಗೆಲುವು ಕಂಡಿರುವ ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಈ ಬಾರಿಯೂ ಬಹುಮತದಿಂದ ಗೆದ್ದಿದ್ದಾರೆ. ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಪ್ರಬಲ ಸ್ಪರ್ಧಿಯಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸಹ ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಗೆಲುವಿನ ಬಗ್ಗೆ ಯು.ಟಿ. ಖಾದರ್‌ ಮಾತನಾಡಿ, ಇದು ಸತ್ಯ ಮತ್ತು ಅಸತ್ಯದ ಚುನಾವಣೆ. ಜ್ಞಾನ ಮತ್ತು ಅಜ್ಞಾನದ ಚುನಾವಣೆಯಲ್ಲಿ ಜನರು ಜ್ಞಾನದ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್‌ನನ್ನು ಗೆಲ್ಲಿಸಿದ್ದಾರೆ. ಯಾರು ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಅವರು ಸೋಲನ್ನು ಅನುಭವಿಸಿದ್ದಾರೆ. ಇಲ್ಲಿ ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಅಗತ್ಯವಾಗಿದೆ. ಮಂಗಳೂರಿನ ಅಭಿವೃದ್ಧಿಗೆ ಏನೇನು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕೋ, ಅದನ್ನು ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more