Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

Published : Apr 28, 2024, 12:06 PM ISTUpdated : Apr 28, 2024, 12:45 PM IST

ಭಗವಂತ್ ಖುಬಾಗೆ ಮರಾಠ ಸಮುದಾಯದಿಂದ ಟಕ್ಕರ್ ನೀಡಲಾಗಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ದಿನಕರ್ ಮೋರೆ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯಿಂದ ಉಚ್ಛಾಟನೆಯಾಗಿದ್ದ ಆರು ಜನ ಮರಾಠ ಮುಖಂಡರು ಬಂಡಾಯ ಅಭ್ಯರ್ಥಿಗೆ ಶಕ್ತಿ ತುಂಬಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ (Lok Sabha Elections 2024) ಕರ್ನಾಟಕದಲ್ಲಿ ಬಿಜೆಪಿ (BJP) ಟಿಕೆಟ್‌ ಹಂಚಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಭಿನ್ನಾಭಿಪ್ರಾಯಗಳಿಗೆ. ಈ ನಡುವೆ ದೊಡ್ಡ ಮಟ್ಟದ ಲೀಡರ್‌ಗಳೇ ಬಿಜೆಪಿಗೆ ಈಗ ಮಗ್ಗುಲು ಮುಳ್ಳಾಗಿದ್ದಾರೆ. ಅದರಂತೆ  ಬೀದರ್‌ನಲ್ಲಿ(Bidar) ಲೋಕಸಭಾ ರಣ ಕಣ ರಂಗೇರಿದ್ದು, ಈ ನಡುವೆ ಇಲ್ಲಿ ಮರಾಠ ಬಂಡಾಯದ (Maratha leaders) ಬಿಸಿ ಬೆಜೆಪಿಗೆ ತಟ್ಟಲಿದೆ. ಭಗವಂತ್ ಖುಬಾಗೆ  (Bhagwant Khuba) ಮರಾಠ ಸಮುದಾಯದಿಂದ ಟಕ್ಕರ್ ನೀಡಲಾಗಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ದಿನಕರ್ ಮೋರೆ (Dinkar More) ಕಣಕ್ಕೆ ಇಳಿದಿದ್ದಾರೆ. ಅಲ್ಲದೆ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದ ಆರು ಜನ ಮರಾಠ ಮುಖಂಡರು ಬಂಡಾಯ ಅಭ್ಯರ್ಥಿಗೆ ಶಕ್ತಿ ತುಂಬಲಿದ್ದಾರೆ. ಇನ್ನು ದಿನಕರ್ ಮೋರೆ ಅವರು ಬೀದರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿಯಿಂದ ದೂರ ಉಳಿದಿದ್ದ ಇವರು ಇದೀಗ ತಮ್ಮ ಸಾಮರ್ಥ್ಯ ಏನು ಅನ್ನೋದನ್ನು ತೋರಿಸಲು ಮುಂದಾಗಿದ್ದಾರೆ. ಈ ನಡುವೆ  ಬೀದರ್ ಕ್ಷೇತ್ರದಲ್ಲಿ 2 ಲಕ್ಷ ಮರಾಠ ಮತಗಳೇ ನಿರ್ಣಾಯಕವಾಗಿದ್ದು, ಮೋರೆಗೆ ಮರಾಠರ ಬೆಂಬಲ ಸಿಕ್ರೆ ಕೂಬಾಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಕ್ಷೇತ್ರದಲ್ಲಿ ಬಿಜೆಪಿಗೆ ಭಾರಿ ಹೊಡೆತ ಬೀಳುವ ಸಾಧ್ಯತೆ ಇದೆ. ಜೊತೆಗೆ ದಿನಕರ್ ಮೋರೆ ಸ್ಫರ್ಧೆ ಬಿಜೆಪಿಗೆ ದೊಡ್ಡ ತಲೆನೋವಿನ ವಿಚಾರವಾಗಿದೆ.

ಇದನ್ನೂ ವೀಕ್ಷಿಸಿ:  Prajwal Revanna Sex Scandal: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more